Rajesh Naik

ಮೋದಿ ನೇತೃತ್ವದ ಸರಕಾರ 3 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಬಿ.ಸಿ. ರೋಡಿನಲ್ಲಿ ಸಂಭ್ರಮಾಚರಣೆ

ಕೇಂದ್ರದ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರ 3 ವರ್ಷ ಪೂರೈಸಿದ ಸಂಧರ್ಭದಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ನೇತೃತ್ವದಲ್ಲಿ ಸಂಭ್ರಮಾಚರಣೆ ಬಿ.ಸಿ.ರೋಡಿನಲ್ಲಿ ಜರಗಿತು. ಸಾರ್ವಜನಿಕರಿಗೆ ಚಹಾ ವಿತರಿಸಿ ಕೇಂದ್ರ ಸರಕಾರದ 3 ವರ್ಷ ಅವಧಿಯ ಜನಪರ ಯೋಜನೆಗಳನ್ನು ಜನರಿಗೆ ತಿಳಿಸುವ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಯಿತು.

bjp-bantwal-3yrs

ರಾಜ್ಯ ಬಿಜೆಪಿ ಸಹವಕ್ತಾರೆ ಶ್ರೀಮತಿ ಸುಲೋಚನ ಜಿ.ಕೆ.ಭಟ್, ಪ್ರಮುಖರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕ್ಷೇತ್ರದ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಸುಗುಣ ಕಿಣಿ, ಕ್ಷೇತ್ರ ಪ್ರಧಾನಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಮೋನಪ್ಪ ದೇವಸ್ಯ, ಕಾರ್ಯದರ್ಶಿಗಳಾದ ಸೀತಾರಾಮ ಪೂಜಾರಿ, ರಮನಾಥ ರಾಯಿ, ಗಣೇಶ್ ರೈ, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಸುದರ್ಶನ್, ಕ್ಷೇತ್ರ ಮೋರ್ಚಾ ಪ್ರಮುಖರಾದ ತನಿಯಪ್ಪ ಗೌಡ, ಪುರುಷೋತ್ತಮ ಶೆಟ್ಟಿ, ವಸಂತ ಅಣ್ಣಳಿಕೆ, ದಿನೇಶ್ ಭಂಡಾರಿ, ಮಹಾಬಲ ಶೆಟ್ಟಿ, ಜಗದೀಶ ಭಂಡಾರಿ, ಗೋಪಾಲ ಸುವರ್ಣ, ಜಿನೇಂದ್ರ ಜೈನ್, ಗುರುದತ್, ಮಚ್ಚೇಂದ್ರ ಸಾಲಿಯಾನ್ ಮತ್ತು ಇತರ ಪ್ರಮುಖರು ಉಪಸ್ಥಿತರಿದ್ದರು.

Back To Top
Highslide for Wordpress Plugin