Rajesh Naik

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಪಿ ಅರುಣ್‍ಕುಮಾರ್ ಅವರಿಂದ ಶರತ್ ಮನೆಗೆ ಭೇಟಿ

ಇತ್ತೀಚಿಗೆ ದುರ್ಷ್ಕಮಿಗಳಿಂದ ಹತ್ಯೆಗೀಡಾದ ಶರತ್ ಮಡಿವಾಳರವರ ಮನೆಗೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಪಿ ಅರುಣ್ ಕುಮಾರ್ ರವರು ಬುಧವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶರತ್ ಮಡಿವಾಳರ ತಂದೆ ತನಿಯಪ್ಪ ಮಡಿವಾಳರೊಂದಿಗೆ ಮಾತನಾಡಿ ಘಟನೆಯ ಸಂಪೂರ್ಣ ವಿವರವನ್ನು ಪಡೆದು ಮನೆಮಂದಿಗೆ ಸಾಂತ್ವಾನ ಹೇಳಿದರು. ಬಿಜೆಪಿ ದ.ಕ ಜಿಲ್ಲಾ ಅಧ್ಯಕ್ಷರಾದ ಸಂಜೀವ ಮಠಂದೂರು, ಪ್ರಧಾನಕಾರ್ಯದರ್ಶಿ ಕಿಶೋರ್ ರೈ, ಹಿಂದುಳಿದ ವರ್ಗ ಮೋರ್ಚಾ ಮಂಗಳೂರು ದಕ್ಷಿಣ ಮಂಡಲದ ಅಧ್ಯಕ್ಷ ಸದಾನಂದ ನಾವೂರ, ಬಂಟ್ವಾಳ ಮಂಡಲದ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಬಿಜೆಪಿ ಪ್ರಮುಖರದ ರಾಜೇಶ್ ನಾಕ್ ಉಳಿಪ್ಪಾಡಿ, ಪುಷ್ಪರಾಜ್ ಚೌಟ, ನಂದರಾಮ ರೈ, ಪ್ರವೀಣ್ ಗಟ್ಟಿ, ರೂಪೇಶ್ ಆಚಾರ್ಯ ಇನ್ನಿತರ ಸ್ಥಳೀಯ ಬಿಜೆಪಿ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.

arunji-visit-sharat-home

Back To Top
Highslide for Wordpress Plugin