Rajesh Naik

ನರಿಕೊಂಬು ಗ್ರಾ.ಪಂ. ವತಿಯಿಂದ ಅಭಿನಂದನಾ ಕಾರ್ಯಕ್ರಮ

ನರಿಕೊಂಬು ಬಿಜೆಪಿ ಗ್ರಾಮ ಪಂಚಾಯತ್ ಸಮಿತಿ ವತಿಯಿಂದ ಬಂಟ್ವಾಳ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ರಾಜೇಶ್ ನಾಯ್ಕ್ ಉಳಿಪಾಡಿ ಇವರಿಗೆ ಪಾಣೆಮಂಗಳೂರು ಸುಮಂಗಲ ಕಲ್ಯಾಣ ಮಂಟಪದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಸಲಾಯಿತು.

ಶಾಸಕರು ಮಾತನಾಡಿ ನಾನು ಯಾವುದೇ ದ್ವೇಷದ ರಾಜಕಾರಣ ಮಾಡದೇ ರಾಜಧರ್ಮ ಪಾಲಿಸುವುದಾಗಿ ಹೇಳಿದರಲ್ಲದೆ, ಎಲ್ಲರನ್ನೂ ಪ್ರೀತಿ ವಿಶ್ವಾಸದಿಂದ ಕಾಣುತ್ತೇನೆ, ರಾತ್ರಿ ಹಗಲೆನ್ನದೆ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ನಂತರ ಮಾತನಾಡಿದ ಜಿಲ್ಲಾ ಬಿಜೆಪಿ ವಕ್ತಾರರಾದ ಹರಿಕೃಷ್ಣ ಬಂಟ್ವಾಳ್ ದೇಶದ ಜನ ಮೆಚ್ಚಿದ ನಾಯಕ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಕನಸನ್ನು ನನಸು ಮಾಡಲು ಕಾರ್ಯಕರ್ತರು ತನ್ನನ್ನು ತಾನು ತೊಡಗಿಸಿಕೊಳ್ಳಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಮಂಡಲದ ಅಧ್ಯಕ್ಷ ದೇವದಾಸ ಶೆಟ್ಟಿಯವರು ಮಾತನಾಡಿ ಬಂಟ್ವಾಳ ತಾಲೂಕಿನಲ್ಲಿ ಅತೀ ಹೆಚ್ಚು ಮತಗಳ ಮುನ್ನಡೆಯನ್ನು ಗಳಿಸಿದ ನರಿಕೊಂಬು ಮತ್ತು ಶಂಭೂರು ಗ್ರಾಮದ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಅಭಿನಂದನೆ ಸಲ್ಲಿಸಿ, ಕಾರ್ಯಕರ್ತರು ಇನ್ನಷ್ಟು ಶ್ರಮ ಪಟ್ಟಲ್ಲಿ ನರೇಂದ್ರ ಮೋದೀಜಿಯವರ ಕಾಂಗ್ರೆಸ್ ಮುಕ್ತ ಪಂಚಾಯತ್ ಆಗಲು ಹೆಚ್ಚು ಸಮಯ ಬೇಕಾಗಿಲ್ಲ ಎಂದರು.

ಕಾರ್ಯಕ್ರಮದಲ್ಲಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಶ್ಯ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಿ. ಆನಂದ, ನರಿಕೊಂಬು ಬಿಜೆಪಿ ಗ್ರಾಮ ಪಂಚಾಯತ್ ಸಮಿತಿ ಅಧ್ಯಕ್ಷರಾದ ಪುರುಷೋತ್ತಮ ಮಾಣಿಮಜಲು, ಜಿಲ್ಲಾ ಪಂಚಾಯತ್ ಸದಸ್ಯೆ ಕಮಲಾಕ್ಷಿ ಕೆ. ಪೂಜಾರಿ, ತಾಲೂಕು ಪಂಚಾಯತ್ ಸದಸ್ಯ ಯಶವಂತ ಪೊಳಲಿ, ಮೋಹನ ಪಿ. ಎಸ್., ಪ್ರಭಾಕರ ಪ್ರಭು, ರಂಜಿತ್ ಮೈರಾ, ಕೇಶವ ಪಿ. ಹೆಚ್., ರಾಜಾರಾಮ್ ನಾಯಕ್, ಪಾಂಡುರಂಗ ಪ್ರಭು, ರೋಹಿತ್ ಮರ್ದೋಳಿ, ಜನಾರ್ಧನ ಕುಲಾಲ್, ರಮಾನಾಥ ರಾಯಿ ಹಾಗೂ ಪಂಚಾಯತ್ ಸದಸ್ಯರು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶೋಧರ ಕರ್ಬೆಟ್ಟು ಸ್ವಾಗತಿಸಿದರು, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಆನಂದ ಶಂಭೂರು ಪ್ರಸ್ತಾವನೆಗೈದು ವಸಂತ ಭಿಮಗದ್ದೆ ವಂದಿಸಿದರು. ಸುರೇಶ್ ಕೋಟ್ಯಾನ್ ಮತ್ತು ಕೇಶವ ಬಿ. ನಿರೂಪಿಸಿದರು.

narikombu-1

narikombu-2

Back To Top
Highslide for Wordpress Plugin