Rajesh Naik

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರಿಗೆ ಶ್ರದ್ಧಾಂಜಲಿ ಸಭೆ

ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಬಿ.ಸಿ ರೋಡಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರಿಗೆ ಶ್ರದ್ಧಾಂಜಲಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮಾತನಾಡಿಅಟಲ್‌ಜಿಯವರು ಪಕ್ಷವನ್ನು ಬೆಳೆಸುವುದರೊಂದಿಗೆ ರಾಮರಾಜ್ಯ ನಿರ್ಮಾಣದಕನಸನ್ನು ನಮ್ಮಲ್ಲಿ ಬಿತ್ತಿದರು. ಅವರ ಪ್ರೇರಣೆಯಿಂದಲೇ ಇಂದು ಬಿಜೆಪಿ ವಿಶ್ವದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆಎಂದರು. ಅವರ ಆಡಳಿತ ಕಾಲದಲ್ಲಿ ಭಾರತ ವಿಶ್ವ ಮಾನ್ಯತೆ ಪಡೆದಿದ್ದು ಪೋಖ್ರಾನ್‌ ಅಣು ಪರಿಕ್ಷೆಯ ಮೂಲಕ ಭಾರತದ ಶಕ್ತಿಯನ್ನು ಜಗತ್ತಿಗೆ ಪರಿಚಯಿಸಿದರು. ಗ್ರಾಮಗಳ ಅಭಿವೃದ್ಧಿಗೆಒತ್ತು ನೀಡಿದ್ದರು. ಕರಾವಳಿಯ ಅವಿನಾಭಾವ ಸಂಬಂಧ ಹೊಂದಿದ್ದರು ಅನೇಕ ಚುನಾವಣಾ ಪ್ರಚಾರ ಸಭೆಯಲ್ಲಿ ಕರಾವಳಿಯ ಕಾರ್‍ಯಕರ್ತರನ್ನು ಹುರಿದುಂಬಿಸುತ್ತಿದ್ದರು ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಪ್ರಧಾನ ಕಾರ್‍ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪದೇವಸ್ಯ, ಜಿಲ್ಲಾಉಪಾಧ್ಯಕ್ಷರಾದಜಿ.ಆನಂದ, ಕಾರ್‍ಯದರ್ಶಿಗಳಾದ ರಮಾನಾಥರಾಯಿ, ಸೀತರಾಮ ಪೂಜಾರಿ, ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ದಿನೇಶ್‌ಅಮ್ಟೂರು, ಜಿ.ಪಂ ಸದಸ್ಯರಾದ ರವಿಂದ್ರ ಕಂಬಳಿ,ರೊನಾಲ್ಡ್ ಡಿ.ಸೋಜ ಮತ್ತು ಪಕ್ಷದ ಪದಾಧಿಕಾರಿಗಳು ಕಾರ್‍ಯಕರ್ತರು ಉಪಸ್ಥಿತರಿದ್ದರು. ಬಳಿಕ ಸಭೆಯಲ್ಲಿ 20-08-2018 ಸೋಮವಾರ ಬಿ.ಸಿ ರೋಡಿನ ಸ್ಪರ್ಶಕಲಾ ಮಂದಿರದಲ್ಲಿ ಅಟಲ್‌ಜಿಯವರ ಸಾರ್ವಜನಿಕ ಶ್ರದ್ಧಾಂಜಲಿ ಸಭೆಯನ್ನು ನಡೆಸಲು ತೀರ್ಮಾನಿಸಲಾಯಿತು.

shraddhanjali-to-atal-ji

Back To Top
Highslide for Wordpress Plugin