Rajesh Naik

ಬಿ.ಸಿ ರೋಡ್: ಶಬರಿಮಲೆ ಸಂರಕ್ಷಣೆ ಹೋರಾಟಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸಾಥ್

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ನಡೆಯುತ್ತಿರುವ ಶಬರಿಮಲೆ ಅಯ್ಯಪ್ಪ ದೇವಾಲಯ ಸಂರಕ್ಷಣೆ ಹೋರಾಟಕ್ಕೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಾಲಾ ಸೀತಾರಾಮನ್ ಬೆಂಬಲ ವ್ಯಕ್ತಪಡಿಸಿದರು.

ಅವರು ಧರ್ಮಸ್ಥಳಕ್ಕೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುವ ಸಂದರ್ಭದಲ್ಲಿ ದಾರಿ ಮಧ್ಯೆ ಬಿ.ಸಿ.ರೋಡಿನಲ್ಲಿ ಶಾಸಕ ರಾಜೇಶ್ ನಾಯ್ಕ್ ಮತ್ತು ಅಯ್ಯಪ್ಪ ಭಕ್ತ ವೃಂದದ ವತಿಯಿಂದ ಬಿ.ಸಿ.ರೋಡಿನಲ್ಲಿ ನಡೆಯುತ್ತಿರುವ ಶಬರಿಮಲೆ ಸಂರಕ್ಷಣೆಗಾಗಿ ಉಪವಾಸ ಸತ್ಯಾಗ್ರಹ ಹಾಗೂ ಭಜನೆಯ ಮೂಲಕ ಪ್ರತಿಭಟನೆ ನಡೆಸುವ ಭಕ್ತರಿಗೆ ಬೆಂಬಲ ನೀಡುವ ಸಲುವಾಗಿ ಬಿ.ಸಿ.ರೋಡಿನ ಪ್ಲೈ ಒವರ್ ನಡಿಯಲ್ಲಿ ಕಾರಿನಿಂದ ಇಳಿದು ಮಾತನಾಡಿ ಬಳಿಕ ತೆರಳಿದರು.

ಈ ಸಂದರ್ಭದಲ್ಲಿ ಶಾಸಕ ರಾಜೇಶ್ ನಾಯ್ಕ್, ಜಿ.ಪಂ.ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಂಟ್ವಾಳ ಬಿಜೆಪಿ ಅದ್ಯಕ್ಷ ದೇವದಾಸ ಶೆಟ್ಟಿ,ಪ್ರಮುಖರಾದ ಸುಲೋಚನ ಜಿ.ಕೆ.ಭಟ್, ಜಿ.ಆನಂದ ಬಂಟ್ವಾಳ, ಪ್ರತಾಪ್ ಸಿಂಹ ಬೆಳ್ತಂಗಡಿ, ದಿನೇಶ್ ಅಮ್ಟೂರು, ಗೋವಿಂದ ಪ್ರಭು, ಉದಯರಾವ್, ರಾಮ್ ದಾಸ ಬಂಟ್ವಾಳ ಮತ್ತಿತರರು ಉಪಸ್ಥಿತರಿದ್ದರು.

RN-nirmala-sitharaman

courtesy : www.nammabantwala.com

Back To Top
Highslide for Wordpress Plugin