Rajesh Naik

ಇಂದಿರಾ ಕ್ಯಾಂಟೀನ್‌ನ ಅಕ್ರಮ ಕಾಮಗಾರಿಗೆ ಸಹಕಾರ ಇಲ್ಲ: ಶಾಸಕ ರಾಜೇಶ್ ನಾಯ್ಕ್

ಬಿ.ಸಿ ರೋಡಿನಲ್ಲಿರುವ ಇಂದಿರಾ ಕ್ಯಾಂಟೀನ್ ಕಾಂಪೌಂಡ್ ಕಾಮಗಾರಿಯನ್ನು ಆರಂಭಿಸಿದ ವೇಳೆ ಪುರಸಭಾ ಸದಸ್ಯರಾದ ಗೋವಿಂದ ಪ್ರಭು ಮತ್ತು ದೇವದಾಸ್ ಶೆಟ್ಟಿ ವಿರೋಧಿಸಿ ಕಾಮಗಾರಿ ನಡೆಯುವ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.

ವಿವಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ರಾಜೇಶ್ ನಾಯ್ಕ್ ಅಕ್ರಮವಾಗಿ ನಡೆಯುವ ಇಂದಿರಾ ಕ್ಯಾಂಟೀನ್ ಕಾಂಪೌಂಡ್ ಕಾಮಗಾರಿಯನ್ನು ನಿಲ್ಲಿಸುವಂತೆ ಪೋಲಿಸ್ ಅಧಿಕಾರಿಗಳಿಗೆ ಮತ್ತು ಕಂದಾಯ ಅಧಿಕಾರಿಗಳಿಗೆ ಆಗ್ರಹಿಸಿದರು. ಅಕ್ರಮವಾಗಿ ನಡೆಯುವ ಕಾಮಗಾರಿಗಳಿಗೆ ಯಾವುದೇ ಕಾರಣಕ್ಕೂ ಸಹಕಾರ ನೀಡುವುದಿಲ್ಲ ಎಂದರು.

ಈ ಸಂದರ್ಭದಲ್ಲಿ ನಗರ ಠಾಣಾಧಿಕಾರಿ ಚಂದ್ರಶೇಖರ್, ಅಪರಾಧ ವಿಭಾಗದ ಎಸ್‌ಐ ಹರೀಶ್, ಬಂಟ್ವಾಳ ಎಸ್‌ಪಿ ಋಷಿಕೇಶ್ ಭಗವಾನ್ ಸೋನಾವಣೆ ಹಾಗೂ ಮತ್ತಿತರರು ಇದ್ದರು.

indira-canteen-compound-2

indira-canteen-compound-3

indira-canteen-compound-1

Back To Top
Highslide for Wordpress Plugin