Rajesh Naik

ಭಾರತೀಯ ಜನತಾ ಪಾರ್ಟಿ ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯಕಾರಿಣಿ ಸಭೆ

ಭಾರತೀಯ ಜನತಾ ಪಾರ್ಟಿ ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯಕಾರಿಣಿ ಸಭೆಯು ಬಿ.ಸಿ.ರೋಡಿನ ಗೀತಾಂಜಲಿ ಸಭಾಭವನದಲ್ಲಿ ಜರಗಿತು. ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾೖಕ್‌ ಉಳಿಪ್ಪಾಡಿಯವರು ಕಾರ್ಯಕ್ರಮ ಉದ್ಫಾಟಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದನ್ನು ನೋಡಲು ವಿಶ್ವವೇ ಕಾತರದಿಂದ ಇರುವ ಈ ಸಂಧರ್ಭದಲ್ಲಿ ಬಿಜೆಪಿಯ ಕಾರ್ಯಕರ್ತರು ಸಂಘಟಿತರಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕೆಲಸಕಾರ್ಯಗಳನ್ನು ಮಾಡಲು ಕರೆ ನೀಡಿದರು. ವೇದಿಕೆಯಲ್ಲಿ ಬಂಟ್ವಾಳ ಕ್ಷೇತ್ರ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ,ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ ಭಟ್, ಜಿಲ್ಲಾ ಉಪಾಧ್ಯಕ್ಷರಾದ ಜಿ.ಆನಂದ, ಬಂಟ್ವಾಳ ಕ್ಷೇತ್ರ ಪ್ರಭಾರಿ ಚಂದ್ರಹಾಸ ಉಳ್ಳಾಲ್, ಎಸ್.ಸಿ.ಮೋರ್ಚಾ ಜಿಲ್ಲಾಧ್ಯಕ್ಷರು ದಿನೇಶ್ ಅಮ್ಟೂರು, ಜಿಲ್ಲಾ ಯುವ ಮೋರ್ಚಾ ಪ್ರಧಾನಕಾರ್ಯದರ್ಶಿ ಸಂದೇಶ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ. ತುಂಗಪ್ಪ ಬಂಗೇರ, ಕಮಲಾಕ್ಷಿ ಕೆ ಪೂಜಾರಿ, ಕ್ಷೇತ್ರ ಪ್ರಧಾನಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು. ಇತ್ತೀಚೆಗೆ ನಿಧನರಾದ ಕೇಂದ್ರ ಸಚಿವರಾದ ಎಚ್.ಎಂ ಅನಂತ್ ಕುಮಾರ್, ಚಲನಚಿತ್ರ ನಟ ಮಾಜಿ ಕೇಂದ್ರ ಸಚಿವ ಅಂಬರೀಷ್, ಮಾಜಿ ಕೇಂದ್ರ ಸಚಿವ ಜಾಫರ್ ಶರೀಷ್ ಹಾಗೂ ಇತ್ತಿಚೆಗೆ ಮಂಡ್ಯ ಜಿಲ್ಲೆಯ ಪಾಂಡವಪುರ ಗ್ರಾಮದಲ್ಲಿ ಬಸ್ ಅಫಘಾತದಲ್ಲಿ ನಿಧನರಾದವರಿಗೆ ಶೃದ್ಧಾಂಜಿಲಿ ಅರ್ಪಿಸಲಾಯಿತು. ಕ್ಷೇತ್ರ ಪ್ರಧಾನಕಾರ್ಯದರ್ಶಿ ಮೋನಪ್ಪ ದೇವಸ್ಯ ಸ್ವಾಗತಿಸಿ, ಕಾರ್ಯದರ್ಶಿ ರಂಜಿತ್ ಮೈರ ವಂದಿಸಿದರು.

BJP-Mandal-karyakarini-sabhe 2018

Back To Top
Highslide for Wordpress Plugin