Rajesh Naik

ಸದಸ್ಯತಾ ಅಭಿಯಾನ ಯಶಸ್ವಿಗೊಳಿಸುವುದರ ಮೂಲಕ ಪಕ್ಷ ಸಂಘಟನೆಗೆ ಒತ್ತು ಕೊಡಿ : ರಾಜೇಶ್ ನಾಯ್ಕ್ ಉಳಿಪ್ಪಾಡಿ

ಬಿ.ಜೆ.ಪಿ ಸದಸ್ಯತಾ ಅಭಿಯಾನದ ಪ್ರಗತಿ ಪರಿಶೀಲನ ಸಭೆಯು ಈ ದಿನ ಬಿ.ಸಿ.ರೋಡಿನ ಗೀತಾಂಜಲಿ ಸಭಾಂಗಣದಲ್ಲಿ ಜರಗಿತು. ಈ ಸಭೆಯನ್ನು ಉದ್ದೇಶಿಸಿ ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್ ಮಾತಾನಾಡಿ ಸದಸ್ಯತಾ ಅಭಿಯಾನವು ಪಕ್ಷದ ಸಂಘಟನೆ ಒಂದು ಭಾಗವಾಗಿದ್ದು, ಇಡೀ ದೇಶದಲ್ಲಿ ಅಭಿಯಾನ ಪ್ರಾರಂಭಗೊಂಡಿದ್ದು ನಮ್ಮ ಕ್ಷೇತ್ರದಲ್ಲಿ ನಮಗೆ ನೀಡಿರುವ ಗುರಿಯನ್ನು ನಾವು ಮುಟ್ಟಲು ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರು ಸದಸ್ಯತಾ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅಭಿಯಾನವನ್ನು ಯಶಸ್ವಿಗೊಳಿಸಲು ಕಾರ್ಯಕರ್ತರಿಗೆ ಕರೆ ನೀಡಿದರು.

ಸಭೆಯ ಅದ್ಯಕ್ಷತೆಯನ್ನು ಕ್ಷೇತ್ರ ಅಧ್ಯಕ್ಷರಾದ ದೇವದಾಸ ಶೆಟ್ಟಿ ವಹಿಸಿದ್ದು ಸದಸ್ಯತಾ ಅಭಿಯಾನದ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಇತ್ತೀಚೆಗೆ ನಮ್ಮನ್ನಗಲಿದ ಹಿರಿಯ ಸಾಹಿತಿ,ವಿಹಿಂಪದ ಮಾಜಿ ಅಧ್ಯಕ್ಷರಾದ ಏರ್ಯ ಲಕ್ಷ್ಮೀನಾರಾಯಣ ಆಳ್ವರಿಗೆ ಪಕ್ಷದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸದಸ್ಯತಾ ಅಭಿಯಾನದ ಕ್ಷೇತ್ರ ಸಂಚಾಲಕರಾದ ದೇವಪ್ಪ ಪೂಜಾರಿ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಈ ವೇದಿಕೆಯಲ್ಲಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಕ್ಯಾ.ಬ್ರಿಜೇಶ್ ಚೌಟ, ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ,ಮಾಜಿ ಶಾಸಕರಾದ ಕೆ.ಪದ್ಮನಾಭ ಕೊಟ್ಟಾರಿ,ಕ್ಷೇತ್ರ ಪ್ರಧಾನಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ,ಮೋನಪ್ಪ ದೇವಸ್ಯ ಉಪಸ್ಥಿತರಿದ್ದರು.

membership-meeting-1

Back To Top
Highslide for Wordpress Plugin