Rajesh Naik

ಅನರ್ಹ ಪಡಿತರ ಚೀಟಿ ರದ್ದತಿಗೆ ದಂಡ ವಸೂಲಾತಿ ಕೈಬಿಡುವಂತೆ ಉಸ್ತುವಾರಿ ಸಚಿವರಿಗೆ ಒತ್ತಾಯ

ಜಿಲ್ಲೆಯಲ್ಲಿ ಅನರ್ಹ ಪಡಿತರ ಚೀಟಿ ರದ್ದತಿಗೆ ದಂಡ ವಸೂಲಿ ಮಾಡುತ್ತಿರುವ ಕ್ರಮದ ಬಗ್ಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಭೇಟಿ ನೀಡಿದ ಸಂಧರ್ಭದಲ್ಲಿ ಶಾಸಕರು ಸಚಿವರ ಗಮನ ಸೆಳೆದು ಇಲಾಖೆಯ ಈ ಕ್ರಮದಿಂದ ಬಡವರ್ಗದ ಜನರಿಗೆ ಆಗುತ್ತಿರುವ ತೊಂದರೆ ಬಗ್ಗೆ ವಿವರಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.

ಶಾಸಕರ ಮನವಿಗೆ ತಕ್ಷಣ ಸ್ಪಂದಿಸಿದ ಸಚಿವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿಯವರಲ್ಲಿ ಮಾತುಕತೆ ನಡೆಸಿ ದಂಡ ವಸೂಲಾತಿಯ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ತಿಳಿಸಿ ಈ ಬಗ್ಗೆ ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರೊಂದಿಗೆ ವಿಷಯದ ಬಗ್ಗೆ ಪ್ರಸ್ತಾಪಿಸುವುದಾಗಿ ತಿಳಿಸಿದರು. ದಂಡ ವಸೂಲಾತಿಯ ಬಗ್ಗೆ ಸರಕಾರದಿಂದ ನೀಡಲಾದ ಆದೇಶ-ಸುತ್ತೋಲೆ ತಕ್ಷಣ ತನಗೆ ಕಳುಹಿಸಿಕೊಡುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

no-bpl-card-kota

Back To Top
Highslide for Wordpress Plugin