Rajesh Naik

ಕಿಯೋನಿಕ್ಸ್ ಸಂಸ್ಥೆಯ ಅಧ್ಯಕ್ಷರಾಗಿ ನೇಮಕವಾದ ಹರಿಕೃಷ್ಣ ಬಂಟ್ವಾಳ ಅವರಿಗೆ ಅಭಿನಂದನೆ

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಸಂಸ್ಥೆಯ ಅಧ್ಯಕ್ಷರಾಗಿ ರಾಜ್ಯ ಸರಕಾರದಿಂದ ನೇಮಕವಾದ ಹರಿಕೃಷ್ಣ ಬಂಟ್ವಾಳರವರು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಕಚೇರಿಗೆ ಭೇಟಿ ನೀಡಿದರು. ಶಾಸಕ ರಾಜೇಶ್ ನಾಯ್ಕ್‌ರವರು ಮಲ್ಲಿಗೆ ಹಾರವನ್ನು ಹಾಕಿ ಶಾಲುನ್ನು ಹೊದಿಸುವ ಮೂಲಕ ಹರಿಕೃಷ್ಣ ಬಂಟ್ವಾಳರವರನ್ನು ಅಭಿನಂದಿಸಿದರು.

ಹರಿಕೃಷ್ಣ ಬಂಟ್ವಾಳರವರು ಹಿರಿಯ ರಾಜಕಾರಿಣಿಯಾಗಿದ್ದು ರಾಜಕೀಯ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಕೆಲಸವನ್ನು ಮಾಡಿ ಪ್ರಸ್ತುತ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಸಂಸ್ಥೆಯ ಅಧ್ಯಕ್ಷರಾಗಿ ನೇಮಕವಾಗಿದ್ದು ಅತೀವ ಸಂತೋಷವಾಗಿದೆ. ಇವರು ಇನ್ನಷ್ಟು ಅಭಿವೃದ್ಧಿಯ ಕೆಲಸವನ್ನು ವಿದ್ಯುನ್ಮಾನ ನಿಗಮದಲ್ಲಿ ಮಾಡಲಿ ಎಂದು ಶುಭ ಹಾರೈಸುತ್ತೇನೆ. ಇವರ ನೇಮಕಕ್ಕೆ ಸಹಕರಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಮತ್ತು ಬಿಜೆಪಿ ರಾಜಾಧ್ಯಕ್ಷರು ಹಾಗೂ ಮಂಗಳೂರು ಸಂಸದರದ ನಳಿನ್ ಕುಮಾರ್ ಕಟೀಲ್ ಇವರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಈ ಸಂಧರ್ಭದಲ್ಲಿ ಬೂಡ ಅದ್ಯಕ್ಷರಾದ ಬಿ.ದೇವದಾಸ್ ಶೆಟ್ಟಿ, ಪ್ರಮುಖರರಾದ ಸೀತಾರಾಮ ಪೂಜಾರಿ, ರಮನಾಥ ರಾಯಿ, ಮನೋಜ್ ಕಳ್ಳಿಗೆ, ಪುಷ್ಪೊರಾಜ್ ಚೌಟ, ಶ್ರೀಕಾಂತ್ ಶೆಟ್ಟಿ, ಪ್ರವೀಣ್ ಗಟ್ಟಿ, ಯಶವಂತ ನಾಯ್ಕ ನಗ್ರಿ, ಪುರುಷೋತ್ತಮ, ನಿತ್ಯಪ್ರಕಾಶ್ ಬಂಟ್ವಾಳ ಮತ್ತಿತರು ಉಪಸ್ಥಿತರಿದ್ದರು.

Back To Top
Highslide for Wordpress Plugin