Rajesh Naik

ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ

ಬಂಟ್ವಾಳ : ಇಲ್ಲಿನ ವಿಧಾನಸಭಾ ಕ್ಷೇತ್ರ ಬಿಜೆಪಿಯ ಚುನಾವಣಾ ಕಾರ್ಯಾಲಯ ಬಂಟ್ವಾಳ ರಥಬೀದಿಯಲ್ಲಿ ಗುರುವಾರ ಉದ್ಘಾಟನೆಗೊಂಡಿತು. ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ ದೀಪ ಬೆಳಗಿಸಿ ಕಾರ್ಯಾಲಯವನ್ನು ಉದ್ಘಾಟಿಸಿದರು. ಕಾರ್ಯಕರ್ತರು ಮತದಾರರ ಮನೆ, ಮನೆಗೆ ತೆರಳಿ ಕಳೆದ ಐದು ವರ್ಷದಲ್ಲಿ ಬಿಜೆಪಿ ಸರಕಾರ ಮಾಡಿರುವ ಸಾಧನೆಗಳನ್ನು ವಿವರಿಸುವ ಮೂಲಕ ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿಯ ಗೆಲುವಿಗೆ ಶ್ರಮಿಸುವಂತೆ ಅವರು ಕರೆ ನೀಡಿದರು.

bjp-election-office
ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಶಾಸಕ ರುಕ್ಮಯ ಪೂಜಾರಿ, ಶಾಸಕರಾದ ಯೋಗೀಶ್ ಭಟ್, ಕ್ಯಾ. ಗಣೇಶ್ ಕಾರ್ಣಿಕ್, ಮಾಜಿ ಸಚಿವ ನಾಗರಾಜ ಶೆಟ್ಟಿ, ಹಿ.ವರ್ಗ ಆಯೋಗದ ಸದಸ್ಯ ತುಂಗಪ್ಪ ಬಂಗೇರ, ರಾಜ್ಯ ಬಾಲಭವನ ಸೊಸೈಟಿ ಅಧ್ಯಕ್ಷೆ ಸುಲೋಚನಾ ಜಿ.ಕೆ ಭಟ್, ಬಿಜೆಪಿ ಮುಖಂಡರಾದ ಶ್ರೀಕರ ಪ್ರಭು, ಜಗದೀಶ್ ಅಧಿಕಾರಿ, ಪ್ರಸಾದ್ ಕುಮಾರ್, ಚೆನ್ನಪ್ಪ ಕೋಟ್ಯಾನ್, ರಾಮದಾಸ್ ಬಂಟ್ವಾಳ, ದೇವದಾಸ ಶೆಟ್ಟಿ, ದಿನೇಶ್ ಭಂಡಾರಿ, ಸದಾನಂದ ಮಲ್ಲಿ, ಗೋವಿಂದ್ ಪ್ರಭು, ಉದಯ ಕುಮಾರ್ ಬಂಟ್ವಾಳ ಮೊದಲಾದವರಿದ್ದರು.

ಇದಕ್ಕೂ ಮುನ್ನ ಅಭ್ಯರ್ಥಿ ರಾಜೇಶ್ ನಾಯ್ಕ್ ರವರು ಪೊಳಲಿ ಶ್ರೀ ರಾಜೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಕ್ಷೇತ್ರದಲ್ಲಿ ತಮ್ಮ ಪ್ರಚಾರ ಕಾರ್ಯಕ್ಕೆ ಅಧಿಕೃತ ಚಾಲನೆ ನೀಡಿದರು.

Back To Top
Highslide for Wordpress Plugin