Rajesh Naik

ಎ.15 ರಾಜೇಶ್ ನಾಯ್ಕರವರ ನಾಮಪತ್ರ ಸಲ್ಲಿಕೆ

Rajesh-Naikಬಂಟ್ವಾಳ : ಬಂಟ್ವಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ರವರು ಸೋಮವಾರ (ಎ.15) ದಂದು ಮಧ್ಯಾಹ್ನ 2.30 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆಂದು ಕ್ಷೇತ್ರ ಬಿಜೆಪಿ ಚುನಾವಣಾ ಮಾಧ್ಯಮ ಪ್ರಮುಖ್ ದಿನೇಶ್ ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಳಿಕ ಬಿ.ಸಿ.ರೋಡಿನ ಪದ್ಮನಾಭ ನಗರದ ಶ್ರೀನಿವಾಸ್ ರಾವ್ ವೇದಿಕೆಯಲ್ಲಿ ಅಭ್ಯರ್ಥಿ ರಾಜೇಶ್ ನಾಯ್ಕ ರವರ ಬೃಹತ್ ಚುನಾವಣಾ ಪ್ರಚಾರ ಸಭೆಯು ನಡೆಯಲಿದೆ.

ಬಿಜೆಪಿ ರಾಷ್ರ್ಟೀಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಪ್ರಧಾನ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಸಂಸದ ನಳಿನ್ ಕುಮಾರ್ ಕಟೀಲು, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿ, ರಾಜ್ಯ ಉಪಾಧ್ಯಕ್ಷೆ ಸುಲೋಚನಾ ಭಟ್ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಈ ಸಭೆಗೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Back To Top
Highslide for Wordpress Plugin