Rajesh Naik

ನಾಮಪತ್ರ ಸಲ್ಲಿಸಿದ ರಾಜೇಶ್ ನಾಯ್ಕ್

ಬಂಟ್ವಾಳ: ಬಂಟ್ವಾಳ ವಿಧಾನಸಭ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಅವರು ಸೋಮವಾರ ಮದ್ಯಾಹ್ನ ಬಂಟ್ವಾಳ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಬಂಟ್ವಾಳ ಬಿಜೆಪಿ ಕಾರ್‍ಯಾಲಯದಿಂದ ಪಕ್ಷದ ಮುಖಂಡರು ಹಾಗೂ ಕಾರ್‍ಯಕರ್ತರೊಂದಿಗೆ ತಾಲೂಕು ಕಚೇರಿಗೆ ಆಗಮಿಸಿದ ಅವರು, ಚುನಾವಣಾಧಿಕಾರಿ ಶಶಿಧರ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಪಧ್ಮನಾಭ ಕೊಟ್ಟಾರಿ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಸುಲೋಚನಾ ಜಿ.ಕೆ.ಭಟ್, ಪುರಸಭ ಸದಸ್ಯ ಎ.ಗೋವಿಂದ ಪ್ರಭು ಅವರು ಉಪಸ್ಥಿತರಿದ್ದರು. ಪಕ್ಷದ ಪ್ರಮುಖರಾದ ದಿನೇಶ್ ಭಂಡಾರಿ, ದೇವದಾಸ ಶೆಟ್ಟಿ,  ದಿನೇಶ್ ಅಮ್ಟೂರು, ನೇಮಿರಾಜ ರೈ, ತುಂಗಪ್ಪ ಬಂಗೇರ, ರಾಮದಾಸ ಬಂಟ್ವಾಳ ಮೊದಲಾದವರಿದ್ದರು.

ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೋಂದಿಗೆ ಮಾತನಾಡಿದ ಅಭ್ಯರ್ಥಿ ರಾಜೇಶ್ ನಾಯಕ್,  ಕಾರ್‍ಯಕರ್ತರೇ ನಮ್ಮ ಪಕ್ಷದ ಆಸ್ತಿ. ಈಗಾಗಲೇ ಕ್ಷೇತ್ರದಾಧ್ಯಂತ ಕಾರ್‍ಯಕರ್ತರು ಉತ್ಸಾಹದಿಂದ ಕೆಲಸ ಮಾಡುತ್ತಿದ್ದು ಬಹುಮತದಿಂದ ಗೆಲ್ಲುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Back To Top
Highslide for Wordpress Plugin