Rajesh Naik

ಕಡೇಶಿವಾಲಯ – ಬರಿಮಾರು ಗ್ರಾಮಗಳ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಸಮಾರಂಭ

ಕಡೇಶಿವಾಲಯ – ಬರಿಮಾರು ಗ್ರಾಮಗಳ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಸಮಾರಂಭವು ತಾ.19-06-2018 ರಂದು ದ.ಕ.ಜಿ.ಪ.ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಡೇಶಿವಾಲಯದಲ್ಲಿ ನಡೆಯಿತು.

ನೂತನ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು 32 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದರು. ನಂತರ ಸಭೆಯನ್ನುದ್ದೇಶಿ ಮಾತನಾಡಿದ ಶಾಸಕರು ಸರಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ತ್ವರಿತ ಗತಿಯಲ್ಲಿ ಯೋಜನೆಗಳನ್ನು ಜನರಿಗೆ ತಲುಪಿಸಬೇಕೆಂದು ಆಧಿಕಾರಿಗಳಿಗೆ ಸೂಚಿಸಿದರು. ನಂತರ ಮಾತನಾಡಿದ ಗೋಳ್ತಮಜಲು ಜಿಲ್ಲಾ ಪಂಚಾಯತ್ ಸದಸ್ಯೆ ಕಮಲಾಕ್ಷಿ ಕೆ ಪೂಜಾರಿಯವರು ಮುಂದಿನ ದಿನಗಳಲ್ಲಿ ಶಾಸಕರ ಜೊತೆಗೂಡಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ನೆರವಾಗುದಾಗಿ ಭರವಸೆಯಿತ್ತರು. ನಂತರ ಅಧ್ಯಕ್ಷೀಯ ಭಾಷಣ ನಡೆಸಿದ ಕಡೇಶಿವಾಲಯ ಗ್ರಾಮ ಪಂಚಾಯತ್ ಸದಸ್ಯೆ ಶ್ಯಾಮಲಾ ಶೆಟ್ಟಿ ಚಿನ್ನಯಕಟ್ಟೆಯವರು ಅಭಿವೃದ್ಧಿ ಕಾರ್ಯಗಳಿಗೆ ವೇಗವನ್ನಿತ್ತ ಶಾಸಕರಿಗೆ ಗ್ರಾಮಸ್ಥರ ಪರವಾಗಿ ಅಭಿನಂದನೆಯನ್ನು ಸಲ್ಲಿಸಿದರು.

ಕಡೇಶಿವಾಲಯ ಗ್ರಾಮಸ್ಥರ ಬಹುಕಾಲದ ಬೇಡಿಕೆಯಾಗಿದ್ದ ಮುಖ್ಯ ರಸ್ತೆ ದುರಸ್ತಿಯ ವಿಚಾರವಾಗಿ ತಕ್ಷಣವೇ ಸ್ಪಂದಿಸಿದ ಶಾಸಕರು ಆದಷ್ಟು ಬೇಗ ಕೆಲಸವಾರಂಭಿಸಲು ಸಂಭದಪಟ್ಟವರಿಗೆ ಸೂಚಿಸಿದ್ದು ವಿಶೇಷವಾಗಿತ್ತು.

ಈ ಸಂಧರ್ಭ ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುರೇಂದ್ರ ರಾವ್, ವ್ಯ.ಸೇ.ಸ.ಬ್ಯಾಂಕ್ ಇದರ ಅಧ್ಯಕ್ಷರಾದ ವಿದ್ಯಾಧರ ರೈ ಪೆರ್ಲಾಪು, ಗ್ರಾಮ ಕರಣಿಕರಾದ ಬಸಪ್ಪ, ಪಂಚಾಯತ್ ಸದಸ್ಯರಾದ ಸನತ್ ಆಳ್ವ, ಸುರೇಶ್ ಪೂಜಾರಿ ಕನ್ನೊಟ್ಟು, ಸುರೇಶ್ ಬನಾರಿ, ಹರಿಶ್ಚಂದ್ರ ಕಾಡಬೆಟ್ಟು, ಸರೋಜ, ಸೇಸಮ್ಮ, ಲಲಿತಾ ಮುಂತಾದವರು ಉಪಸ್ಥಿತರಿದ್ದರು.

kadeshivalaya-barimaru

Back To Top
Highslide for Wordpress Plugin