Rajesh Naik

ಬಂಟರ ಸಂಘ ಬಂಟವಾಳ ತಾಲೂಕು (ರಿ.) – ವಾರ್ಷಿಕ ಕ್ರೀಡೋತ್ಸವ 2018

ಬಂಟ್ವಾಳ: ಬಂಟರ ಸಂಘ ಬಂಟವಾಳ ತಾಲೂಕು (ರಿ.) ವಲಯ ಬಂಟರ ಸಂಘ ಸಜೀಪ ವಲಯ ಇವರ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಮಿತ್ತಮಜಲು ಗದ್ದೆಯ ಕ್ರೀಡಾಂಗಣದಲ್ಲಿ ನಡೆದ ವಾರ್ಷಿಕ ಕ್ರೀಡೋತ್ಸವ 2018 ಇದರ ಸಮಾರೋಪ ಸಮಾರಂಭ ಬಂಟರ ಸಂಘ ಬಂಟವಾಳ ವಲಯ ಅಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಶಿಸ್ತು ಬದ್ಧ ಕ್ರೀಡಾಕೂಟದ ಮೂಲಕ ಯಶಸ್ಸು ಸಾಧಿಸಲು ಪ್ರಯತ್ನಿಸಿದ ಎಲ್ಲಾ ವಲಯದವರಿಗೂ ಅಭಿನಂದನೆ ಸಲ್ಲಿಸಿದರು. ಬೇರೆ ಬೇರೆ ವಲಯಗಳಲ್ಲಿ ಇಂತಹ ಕ್ರೀಡಾಕೂಟಗಳು ಯಶಸ್ವಿಯಾಗಿ ನಡೆಸಿಕೊಂಡು ಹೋಗಲು ಎಲ್ಲರ ಸಹಕಾರಬೇಕಾಗಿದೆ ಎಂದರು.

ಶಾಸಕ ರಾಜೇಶ್ ನಾೖಕ್‌ ಮಾತನಾಡಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಇದೊಂದು ವೇದಿಕೆಯಾಗಿದೆ . ಕ್ರೀಡಾಕ್ಷೇತ್ರದಲ್ಲಿ ಪರಸ್ಪರ ಪ್ರೀತಿಸುವ ಗುಣವನ್ನು ಮೈಗೂಡಿಸಿಕೊಂಡು ಮುನ್ನೆಡೆದಾಗ ಮಾತ್ರ ಕ್ರೀಡೆಯಲ್ಲಿ ಯಶಸ್ಬಿಯಾಗಲು ಸಾಧ್ಯ ಎಂದು ಅವರು ಹೇಳಿದರು. ‌

ಈ ಸಂಧರ್ಭದಲ್ಲಿ ಮುಂಬಯಿ ಕಾರ್ಪೊರೇಟರ್ ಸಂತೋಷ್ ಶೆಟ್ಟಿ ದಳಂದಿಲ, ಪ್ರಜಾ ಟಿ.ವಿ. ಮುಖ್ಯಸ್ಥ ಗುಣರಂಜನ್ ಶೆಟ್ಟಿ, ಅಶ್ವಿನ್ ಕುಮಾರ್ ರೈ, ಎ.ಜೆ.ಆಸ್ಪತ್ರೆ ಯ ಮುಖ್ಯಸ್ಥ ಡಾ| ಪ್ರಶಾಂತ್ ಮಾರ್ಲ, ಸುಪ್ರೀತ್ ಆಳ್ವ ಪೊನ್ನೋಡಿ, ಅರುಣ್ ಆಳ್ವ ಕಾಂತಾಡಿಗುತ್ತು, ಪ್ರಸಾದ್ ಶೆಟ್ಟಿ ಹುಬ್ಬಳ್ಳಿ, , ಮುಂಬಯಿ ಉದ್ಯಮಿ ಆನಂದ ರೈ ಮಾಡಂತಾಡಿಗುತ್ತು, ಕ್ಯಾಪ್ಟನ್ ಬ್ರಿಜೇಶ್ ಚೌಟ, ಉದ್ಯಮಿ ರಿತೇಶ್ ಶೆಟ್ಟಿ, ಉದ್ಯಮಿ ನಿತಿನ್ ಶೆಟ್ಟಿ, ಉದ್ಯಮಿ ಸಾಯಿಗಿರಿಧರ್ ಶೆಟ್ಟಿ, ಉದ್ಯಮಿ ಬಾಲಚಂದ್ರನ್, ಉದ್ಯಮಿ‌ ಭಗವಾನ್ ದಾಸ್ ಭಂಡಾರಿ ಮುಂಬಯಿ, ಪುಣೆ , ದೇವಿಪ್ರಸಾದ್ ಪೂಂಜಾ ಮತ್ತಿತರರು ಉಪಸ್ಥಿತರಿದ್ದರು.

ಶಾಸಕ ರಾಜೇಶ್ ನಾೖಕ್‌, ಮುಂಬಯಿ ಪನ್ದೇಲ್ ಕಾರ್ಪೋರೇಟರ್ ಸಂತೋಷ್ ಶೆಟ್ಟಿ ದಳಂದಿಲ, ಅವರು ಸಹಿತ ಊರಿನ ಹಾಗೂ ಪರ ಊರಿನಿಂದ ಆಗಮಿಸಿ ಈ ಕ್ರೀಡಾ ಕೂಟ ಕ್ಕೆ ಸಹಕಾರ ನೀಡಿದ ಮಹನೀಯರನ್ನು ಗೌರವಿಸಲಾಯಿತು. ಕ್ರೀಡೆಯಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾ ಪಟುಗಳನ್ನು ಸನ್ಮಾನಿಸಲಾಯಿತು. ಕ್ರೀಡಾಕೂಟದಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ ತೀರ್ಪುಗಾರರನ್ನು ಗೌರವಿಸಲಾಯಿತು.

ಕ್ರೀಡಾಕೂಟವನ್ನು ಏರ್ಪಡಿಸಿದ ನಗ್ರಿಗುತ್ತು ವಿವೇಕ್ ಶೆಟ್ಟಿ ಅವರನ್ನು ಮತ್ತು ಶ್ರೀಕಾಂತ್ ಶೆಟ್ಟಿ ಅವರನ್ನು ಗೌರವಿಸಲಾಯಿತು. ‌

Bants-Annual-sports-3

Bants-Annual-sports-1

Bants-Annual-sports-2

Back To Top
Highslide for Wordpress Plugin