Rajesh Naik

ಬಿಜೆಪಿ ಬಡಗಕಜೆಕಾರು ಗ್ರಾ.ಪಂ. ಸಮಿತಿಯ ಕಾರ್ಯಕರ್ತರೊಂದಿಗೆ ಸಂವಾದ

ಬಿಜೆಪಿ ಬಡಗಕಜೆಕಾರು ಗ್ರಾಮ ಪಂಚಾಯತ್ ಸಮಿತಿಯ ಕಾರ್ಯಕರ್ತರೊಂದಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್‌ ಉಳಿಪ್ಪಾಡಿಯವರು ಸಂವಾದ ನಡೆಸಿದರು. ಮೊದಲು ಲೋಕಸಭಾ ಚುನಾವಣೆಯಲ್ಲಿ ದುಡಿದ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸಿದ ಶಾಸಕರು ಬಳಿಕ ಗ್ರಾಮದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪಕ್ಷದ ಕಾರ್ಯಕರ್ತರೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ಬಡಗಕಜೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಬಂಟ್ವಾಳ ಕ್ಷೇತ್ರಾಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಜ್ರ ಪೂಜಾರಿ, ಕಾರ್ಯದರ್ಶಿಗಳಾದ ರಂಜಿತ್ ಪೂಜಾರಿ ಮೈರಾ, ರಮಾನಾಥ ರಾಯಿ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷರಾದ ವಾಸು ದೇವಾಡಿಗ, ದಿನೇಶ್ ಜೇಂಕ್ಯಾರ್, ಪ್ರಕಾಶ್ ಕರ್ಲಾ, ಪ್ರಮೋದ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Badagakajekaru-2

Badagakajekaru-1

Back To Top
Highslide for Wordpress Plugin