Rajesh Naik

ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕರ ಧಿಡೀರ್ ಭೇಟಿ

ಬಂಟ್ವಾಳ: ಪಿಲಾತಬೆಟ್ಟು ಗ್ರಾ.ಪಂ.ವ್ಯಾಪ್ತಿಯ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಧಿಡೀರ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅಲ್ಲಿನ ಸಮಸ್ಯೆಗಳ ಬಗ್ಗೆ ಸಾರ್ವಜನಿರು ಶಾಸಕರ ಗಮನಕ್ಕೆ ತಂದರು.

ಈ ಆಸ್ಪತ್ರೆಯಲ್ಲಿ ಪೂರ್ಣಾವಧಿ ವೈದ್ಯಾಧಿಕಾರಿ ಇಲ್ಲದೆ ಸಾಕಷ್ಟು ತೊಂದರೆಯಾಗುತ್ತಿದೆ. ವಾರಕ್ಕೆ ಎರಡು ಬಾರಿ ವೈದ್ಯರು ಸೇವೆಕ್ಕೆ ಲಭ್ಯವಿರುವುದು ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಶಾಸಕರಲ್ಲಿ ಅಳಲು ತೋಡಿಕೊಂಡರು. ಹೆದ್ದಾರಿಯಲ್ಲಿ ಈ ಆಸ್ಪತ್ರೆ ಇದ್ದು ಅಪಘಾತ ಸಹಿತ ಅನೇಕ ಘಟನೆಗಳಿಗೆ ಈ ಆಸ್ಪತ್ರೆ ಬಹಳ ಅಗತ್ಯವಾಗಿರುವುದರಿಂದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸಲು ಮನವಿ ಮಾಡಿದರು. ವೈದ್ಯರಿಲ್ಲದೆ ಈ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಾತ್ಕಾಲಿಕವಾಗಿ ಬೇರೆ ವೈದ್ಯರ ನೇಮಕ ಮಾಡುವ ಭರವಸೆಯನ್ನು ಶಾಸಕರು ಈ ಸಂದರ್ಭದಲ್ಲಿ ನೀಡಿದರು.

ಜಿ.ಪಂ. ಸದಸ್ಯ ತುಂಗಪ್ಪ ಬಂಗೇರ, ಗ್ರಾ.ಪಂ.ಅದ್ಯಕ್ಷ ಶೇಖರ್ ಶೆಟ್ಟಿ, ತಾ.ಪಂಸದಸ್ಯ ರಮೇಶ್ ಕುಡುಮೇರು, ಗ್ರಾ.ಪಂ.ಸದಸ್ಯರಾದ ಲಕ್ಮೀ ಜೆ ಬಂಗೇರ, ಪಿಲಾತಬೆಟ್ಟು ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಲಕ್ಮೀನಾರಾಯಣ ಉಡುಪ, ಹಾಗೂ ಡಾ| ಸೋಹನ್ ಕುಮಾರ್ ಮತ್ತು ಸಿಬ್ಬಂದಿಗಳು ಮತ್ತಿತರು ಉಪಸ್ಥಿತರಿದ್ದರು.

visit-to-hospital-2

visit-to-hospital-1

Back To Top
Highslide for Wordpress Plugin