Rajesh Naik

ಪಡಿತರ ಚೀಟಿ ಹೊಂದಿರದ ಬಡ ಕಟುಂಬಗಳ ಸಮಸ್ಯೆಗೆ ಸ್ಪಂದಿಸಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತಿಯೊಂದರಲ್ಲಿ ಗ್ರಾಮ ಪಂಚಾಯತ್ ಕಾರ್ಯಪಡೆಯ ಸಭೆ ನಡೆಸಿದ ಸಂದರ್ಭ ಯಾವುದೇ ಪಡಿತರ ಚೀಟಿ ಹೊಂದಿರದ ಬಡ ಕಟುಂಬಗಳ ಸಮಸ್ಯೆಯು ಶಾಸಕರ ಗಮನೆಕ್ಕೆ ಬಂದಿದ್ದು, ಕೂಡಲೇ ಶಾಸಕರು ಬಂಟ್ವಾಳ ತಾಲೂಕು ಕಾರ್ಯ ನಿರ್ವಾಹಕಾಧಿಯವರನ್ನು ಸಂಪರ್ಕಿಸಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಪಡಿತರ ಚೀಟಿ ಹೊಂದಿರ ಕುಟುಂಬಗಳ ಪಟ್ಟಿ ಮಾಡಿ ನೀಡುವಂತೆ ಸೂಚಿದರು. ಅದರಂತೆ 2 ಸಾವಿರಕ್ಕೂ ಮಿಕ್ಕಿ ಬಡ ಕುಟುಂಬಗಳ ಪಟ್ಟಿ ಶಾಸಕರಿಗೆ ಸಲ್ಲಿಕೆಯಾಗಿದ್ದು, ಶಾಸಕರು ತಮ್ಮ ವೈಯಕ್ತಿಕ ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 2 ಸಾವಿರ ಮಿಕ್ಕಿ ಕುಟುಂಬಗಳಿಗೆ ಅಕ್ಕಿ ನೀಡುವ ಕಾರ್ಯಕ್ರಮಕ್ಕೆ ಶಾಸಕರು ತಮ್ಮ ಕಛೇರಿಯಲ್ಲಿ ಇಂದು ಚಾಲನೆ ನೀಡಿದ್ದು, ಈ ಸಂದರ್ಭದಲ್ಲಿ ಬಂಟ್ವಾಳ ಬೂಡ ಅಧ್ಯಕ್ಷರಾದ ಶ್ರೀ ದೇವದಾಸ್ ಶೆಟ್ಟಿ, ಬಂಟ್ವಾಳ ಕ್ಷೇತ್ರ ಬಿ.ಜೆ.ಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ, ಡೊಂಬಯ್ಯ ಅರಳ, ಉಪಾಧ್ಯಕ್ಷರಾದ ವಜ್ರನಾಥ ಕಲ್ಲಡ್ಕ, ಮತ್ತು ಉಮೇಶ್ ಅರಳ, ಕಾರ್ತಿಕ್ ಬಲ್ಲಾಳ್, ಸುದರ್ಶನ್ ಬಜೆ, ಪ್ರಮೋದ್ ಅಜ್ಚಿಬೆಟ್ಟು, ಶ್ರೀಕಾಂತ್ ಶೆಟ್ಟಿ ಸಜಿಪ , ಗಣೇಶ್ ರೈ ಮಾಣಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಯಶವಂತ ನಗ್ರಿ, ಜಯರಾಮ್ ನಾಯ್ಕ್ ಕೊಳ್ನಾಡು, ಪ್ರಕಾಶ್ ಅಂಚನ್, ಸೀತಾರಾಮ ಪೂಜಾರಿ ಇವರುಗಳು ಉಪಸ್ಥಿತರಿದ್ದರು.

Back To Top
Highslide for Wordpress Plugin