Rajesh Naik

ಬಂಟ್ವಾಳ ಬಿ.ಜೆ.ಪಿ ಪಕ್ಷದ ಹಿರಿಯ ಕಾರ್ಯಕರ್ತೆ ಬಿ.ಯಶೋಧ ನಿಧನ : ಶ್ರದ್ಧಾಂಜಲಿ

ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷೆ ಹಾಗೂ ಬಿ.ಜೆ.ಪಿ ಪಕ್ಷದ ಹಿರಿಯ ಕಾರ್ಯಕರ್ತೆಯಾಗಿದ್ದ ಬಿ.ಯಶೋಧರವರು ಇತ್ತೀಚೆಗೆ ನಿಧನರಾಗಿದ್ದು ಈ ದಿನ ಪಕ್ಷ ಕಛೇರಿಯಲ್ಲಿ ಅವರಿಗೆ ಶ್ರದ್ಧಾಂಜಲಿ ಸಭೆ ಜರಗಿತು. ಬೂಡ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿಯವರು ಯಶೋಧರವರ ಕಾರ್ಯ ವೈಖಾರಿ ಮತ್ತು ಪಕ್ಷದ ಸಂಬಂಧದ ಬಗ್ಗೆ ತಿಳಿಸಿ ನುಡಿನಮನ ಸಲ್ಲಿಸಿದರು. ಸಭೆಯಲ್ಲಿ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಮತ್ತು ಸುಲೋಚನ ಜಿ.ಕೆ ಭಟ್ ಶ್ರದ್ಧಾಂಜಲಿ ಸಲ್ಲಿಸಿದರು. ಕ್ಷೇತ್ರಾಧ್ಯಕ್ಷರಾದ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು, ಜಿಲ್ಲಾ ಪಂ.ಸದಸ್ಯರಾದ ರವೀಂದ್ರ ಕಂಬಳಿ, ಕ್ಷೇತ್ರ ಉಪಾಧ್ಯಕ್ಷರಾದ ಚಿದಾನಂದ ರೈ, ರೋನಾಲ್ಡ್ ಡಿ ಸೋಜ, ಕಾರ್ಯದರ್ಶಿಗಳಾದ ರಮಾನಾಥ ರಾಯಿ, ಸೀತಾರಾಮ ಪೂಜಾರಿ, ಪುರುಷೋತ್ತಮ ಶೆಟ್ಟಿ ಹಾಗೂ ಕ್ಷೇತ್ರ ಮಟ್ಟದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಕ್ಷೇತ್ರ ಉಪಾಧ್ಯಕ್ಷರಾದ ವಜ್ರನಾಥ ಕಲ್ಲಡ್ಕ ಸ್ವಾಗತಿಸಿ, ಪ್ರ.ಕಾರ್ಯದರ್ಶಿ ರವೀಶ ಶೆಟ್ಟಿ ವಂದಿಸಿದರು.

Back To Top
Highslide for Wordpress Plugin