Rajesh Naik

ಬಂಟ್ವಾಳ : ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನ ಮತ್ತು ಜಗನ್ನಾಥ್ ರಾವ್ ಜೋಶಿ ಅವರ ಜಯಂತಿ ಆಚರಣೆ

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಆಶ್ರಯದಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನ ಮತ್ತು ಜಗನ್ನಾಥ್ ರಾವ್ ಜೋಶಿ ಅವರ ಜನ್ಮಶತಾಭ್ದಿಯ ಆಚರಣೆ ಬಿ.ಸಿರೋಡ್ ಪಕ್ಷದ ಕಚೇರಿಯಲ್ಲಿ ನಡೆಯಿತು. ಈ ಸಂದರ್ಭ ಜಿಲ್ಲಾ ಪ್ರ.ಕಾರ್ಯದರ್ಶಿ ರಾಮದಾಸ ಬಂಟ್ವಾಳ ಮಾತನಾಡಿ ಜೋಶಿ ಅವರು ನಡೆದ ಹಾದಿ ಸಾಮಾನ್ಯ ಕಾರ್ಯಕರ್ತರಿಗೆ ಮಾರ್ಗದರ್ಶನ ಆಗಿತ್ತು. ಒಂದು ದೇಶದಲ್ಲಿ ದೋ ವಿಧಾನ್ ದೋ ಪ್ರಧಾನ್ ದೋ ನಿಶಾನ್ ನಹೀ ಚಲೇಗ ಎಂಬ ಘೋಷವಾಕ್ಯ ವನ್ನು ಕಾರ್ಯಕರ್ತರಿಗೆ ನೀಡಿದ್ದರು ಅದು ಸಾಕರಗೊಳಿಸಿದ ವರ್ಷ 2020 ಆಗಿದೆ ಎಂದರು. ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ರವರು ಮಾತನಾಡಿ ಯಾವುದೇ ಸೌಲಭ್ಯಗಳಿಲ್ಲದ ಸಮಯದಲ್ಲಿ ಅವರು ಪಕ್ಷ ಕಟ್ಟಿದ ರೀತಿ ಮತ್ತು ಅವರ ಕನಸುಗಳು ಈಡೇರಿದ ವರ್ಷ ಇದು. ನಮ್ಮಂತಹ ಸಾಮಾನ್ಯ ಕಾರ್ಯಕರ್ತರಿಗೆ ಪ್ರಾತಃ ಸ್ಮರಣೀಯರು ಎಂದರು.ಈ ಸಂದರ್ಭದಲ್ಲಿ ಕ್ಷೇತ್ರದ ಪ್ರ.ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಸ್ವಾಗತಿಸಿ, ಡೊಂಬಯ್ಯ ಅರಳ ವಂದಿಸಿದರು. ಕ್ಷೇತ್ರದ ಅಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷ ವಹಿಸಿದ್ದು ಜಿಲ್ಲಾ ಪ್ರಮುಖರಾದ ಸಂದೇಶ್ ಶೆಟ್ಟಿ ಅರೆಬೆಟ್ಟು, ಪಕ್ಷದ ಪದಾಧಿಕಾರಿಗಳು, ಎಲ್ಲಾ ಮೋರ್ಚಾಗಳ ಪ್ರಮುಖರು ಉಪಸ್ಥಿತರಿದ್ದರು.

Back To Top
Highslide for Wordpress Plugin