Rajesh Naik

12 ನೇ ದಿನದ ಬಿಜೆಪಿ ನಡಿಗೆಗೆ ಪಂಜಿಕಲ್ಲಿನಲ್ಲಿ ಚಾಲನೆ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಸಾರಥ್ಯದ 13  ದಿನಗಳ `ಗ್ರಾಮದೆಡೆಗೆ ಬಿಜೆಪಿ ನಡಿಗೆ’ಯ 12 ನೇ ದಿನದ ಪಾದಯಾತ್ರೆಗೆ ಪಂಜಿಕಲ್ಲಿನಲ್ಲಿ ಚಾಲನೆ ನೀಡಲಾಯಿತು. ಪಾದಯಾತ್ರೆಯು ಕೂರಿಯಾಳ, ಅಮ್ಟಾಡಿ, ಕಳ್ಳಿಗೆ ಗ್ರಾಮಗಳಲ್ಲಿ ಸಂಚರಿಸಲಿದೆ.

4600

12 ನೇ ದಿನದ ಪಾದಯಾತ್ರೆಯಲ್ಲಿ ಕಾರ್ಯಕ್ರಮದ ರುವಾರಿ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಪ್ರಮುಖರಾದ ಪ್ರತಾಪ್‌ಸಿಂಹ ನಾಯಕ್, ದೇವದಾಸ್ ಶೆಟ್ಟಿ, ರಾಮ್‌ದಾಸ್, ಪುರುಷ ಸಾಲ್ಯಾನ್ ನೆತ್ತರಕೆರೆ, ಪ್ರಥ್ವಿರಾಜ್, ರಝಾಕ್, ರಮಾನಾಥ ರಾಯಿ, ಸಂಜೀವ ಪೂಜಾರಿ, ಕರುಣೇಂದ್ರ ಪೂಜಾರಿ ಮತ್ತಿತರರು ಹಾಜರಿದ್ದರು.

Back To Top
Highslide for Wordpress Plugin