Rajesh Naik

ಕೋವಿಡ್-19 ಲಸಿಕೆ ಪಡೆದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಪಡೆದುಕೊಂಡರು. ಲಸಿಕೆ ಪಡೆದ ಬಳಿಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಶಾಸಕರು, ತಾನು ಸರಕಾರಿ ಆಸ್ಪತ್ರೆಯಲ್ಲಿ ಲಸಿಕೆ ಪಡೆದುಕೊಂಡಿದ್ದು, 60 ವರ್ಷ ಮೇಲ್ಪಟ್ಟವರು ಹಾಗೂ ವಿವಿಧ ಖಾಯಿಲೆಯಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟ ಬಂಟ್ವಾಳದ ಜನತೆ ಕೋವಿಡ್ ಲಸಿಕೆ ಪಡೆಯುವಂತೆ ಮನವಿ ಮಾಡಿದರು. ಇದರಿಂದ ತಮಗೆ ಹಾಗೂ ಸಮಾಜಕ್ಕೆ ಒಳತಾಗುತ್ತದೆ. ಕೊರೊನಾದ 2ನೇ ಅಲೆಯ ಕುರಿತು ಜನತೆ ಆತಂಕದಲ್ಲಿದ್ದು, ಹೀಗಾಗಿ ತಮ್ಮ ಹಾಗೂ […]

Read More

ಕೇರಳದ ಪಾಲಕ್ಕಾಡ್ ಜಿಲ್ಲೆಯ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ

ಕೇರಳದ ಪಾಲಕ್ಕಾಡ್ ಜಿಲ್ಲೆಯ ಮಲಂಪುಳ ವಿಧಾನಸಭಾ ಕ್ಷೇತ್ರದ ಪುದುಶೆರಿ ಪಂಚಾಯತ್ ವ್ಯಾಪ್ತಿಯ ಪ್ರಿಕಾರ್ಟ್ ಕಾಲೋನಿಯಲ್ಲಿ ಕೇರಳ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕ್ಷೇತ್ರದ ಅಭ್ಯರ್ಥಿ ಸಿ. ಕೆ. ಕ್ರಷ್ಣ ಕುಮಾರ್ ಪರ ಮತಯಾಚನೆ ನಡೆಸಲಾಯಿತು. ಈ ಸಂದರ್ಭದಲ್ಲಿ ವಾರ್ಡ್ ಸದಸ್ಯರಾದ ಜಯಶ್ರೀ ಪಕ್ಷದ ಪ್ರಮುಖರಾದ ಶಿಬುದಾಸ್ ವಿ. ವಿ. ರಾಮಚಂದ್ರನ್ ಲಘು ಉದ್ಯೋಗ ಭಾರತಿಯ ರಾಧಕ್ರಷ್ಣನ್ ಪ್ರಮುಖ ರಾದ ಮಿನಿಮೊಳ್ ಕವಿತಾ ಗಿರೀಶ್ ಉಪಸ್ಥಿತರಿದ್ದರು. ಪಾಲಕ್ಕಾಡ್ ಜಿಲ್ಲೆಯ ಮಲಂಪುಳ ವಿಧಾನಸಭಾ ಕ್ಷೇತ್ರದ ಮುಂಡೂರ್ ಪಂಚಾಯತ್ ವ್ಯಾಪ್ತಿಯ ಮುತ್ತ […]

Read More

ಬಂಟ್ವಾಳ ವಿಧಾನಸಭಾ ಕ್ಷೇತ್ರ – ಪ್ರಾಕೃತಿಕ ವಿಕೋಪ ಪರಿಹಾರ ಚೆಕ್ ವಿತರಣೆ

ಅಮ್ಟಾಡಿ ಗ್ರಾಮದ ಆರತಿ ಶೆಟ್ಟಿ ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಪ್ರಾಕೃತಿಕ ವಿಕೋಪದಡಿ ಪರಿಹಾರವಾಗಿ ರೂ. 54,241- ಚೆಕ್‌ನ್ನು ಕಚೇರಿಯಲ್ಲಿ ಹಸ್ತಾಂತರಿಸಿದರು. ಮಣಿನಾಲ್ಕೂರು ಗ್ರಾಮದ ಚಂದ್ರಹಾಸ ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಪ್ರಾಕೃತಿಕ ವಿಕೋಪದಡಿ ಪರಿಹಾರವಾಗಿ ರೂ. 45,891/- ಚೆಕ್‌ನ್ನು ಕಚೇರಿಯಲ್ಲಿ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಸರಪಾಡಿ ಪಂಚಾಯತ್ ಸದಸ್ಯರಾದ ರಾಮಕೃಷ್ಣ ಮಯ್ಯ, ಧರಣೇಂದ್ರ ಜೈನ್, ಶರ್ಮಿತ್ ಜೈನ್, ಕಾವಳಮೂಡೂರು ಉಪಾಧ್ಯಕ್ಷರಾದ ಅಜಿತ್ ಶೆಟ್ಟಿ ಉಪಸ್ಥಿತರಿದ್ದರು. ದೇವಸ್ಯಮೂಡೂರು ಗ್ರಾಮದ ಸೀತಾ ಇವರಿಗೆ […]

Read More

ಬಂಟ್ವಾಳ ಕಸ್ಬಾ ಗ್ರಾಮದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ಉದ್ಘಾಟನೆ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಂಟ್ವಾಳ ಕಸ್ಬಾ ಗ್ರಾಮದ ಅಗ್ರಾರ್‌ನಿಂದ ದರ್ಬಲ್ಕೆ ಬಾಲಕೃಷ್ಣ ಮಂದಿರದವರೆಗೆ ರೂ. 25 ಲಕ್ಷ ಅನುದಾನದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಫಾಟಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಕ್ಷೇತ್ರ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಪುರಸಭಾ ಸದಸ್ಯೆ ಮೀನಾಕ್ಷಿ ಗೌಡ, ಚಂದ್ರಶೇಖರ ಪೂಜಾರಿ, ಪ್ರಮುಖರಾದ ಮಚ್ಚೇಂದ್ರ ಸಾಲ್ಯಾನ್, ಸುಂದರ ಪೂಜಾರಿ ಅಗ್ರಾರ್, ದೀಕ್ಷಿತ್ ನೇರಂಬೋಳು, ಗಂಗಾಧರ ಸಾಮಾನಿ,ಮನೋರಂಜನ್ ಶೆಟ್ಟಿ, ಸುನೀಲ್ ಕುಮಾರ್ ದರ್ಬೆ, ಕೃಷ್ಣಪ್ಪ ಪೂಜಾರಿ, ಭಾಸ್ಕರ ಪೂಜಾರಿ, ಆನಂದ […]

Read More

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ದೃಡಕಲಶದ ಪೂರ್ವಭಾವಿ ಸಭೆ

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ದೃಡಕಲಶದ ಪೂರ್ವಭಾವಿಯಾಗಿ ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಅಧ್ಯಕ್ಷತೆಯಲ್ಲಿ ತಾಲೂಕಿನ ಅಧಿಕಾರಿಗಳೊಂದಿಗೆ ಕ್ಷೇತ್ರದ ಆಡಳಿತ ಸಮಿತಿಯ ಸಭೆ ಶ್ರೀ ಕ್ಷೇತ್ರದಲ್ಲಿ ನಡೆಯಿತು. ದೃಡಕಲಶದ ಸಂದರ್ಭದಲ್ಲಿ ಕೋವಿಡ್‌ನ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಆಗಮಿಸುವ ಭಕ್ತಾದಿಗಳಿಗೆ ದೇವಿಯ ದರ್ಶನ ಕಲ್ಪಿಸುವ ಬಗ್ಗೆ, ವಾಹನ ನಿಲುಗಡೆ ವ್ಯವಸ್ಥೆ ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮಾನ್ಯ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸೂಚಿಸಿದರು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರಾದ […]

Read More

ಬಂಟ್ವಾಳ ವಿಧಾನಸಭಾ ಕ್ಷೇತ್ರ – ಪ್ರಾಕೃತಿಕ ವಿಕೋಪ ಪರಿಹಾರ ಚೆಕ್ ವಿತರಣೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪ್ರಾಕೃತಿಕ ವಿಕೋಪದ ಪರಿಹಾರದ ಚೆಕ್‌ಗಳನ್ನು ಮಾನ್ಯ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ತಮ್ಮ ಕಚೇರಿಯಲ್ಲಿ ವಿತರಿಸಿದರು. ಪಾಣೆಮಂಗಳೂರು, ಬಂಟ್ವಾಳ ,ವಿಟ್ಲ ಹೋಬಳಿಯ ಒಟ್ಟು ರೂ. 10,97,000 ಚೆಕ್‌ಗಳನ್ನು ಶಾಸಕರು ಸಂತ್ರಸ್ತರಿಗೆ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಜಿ.ಪಂ.ಸದಸ್ಯರಾದ ಕಮಲಾಕ್ಷಿ ಪೂಜಾರಿ, ತಾ.ಪಂ.ಸದಸ್ಯರಾದ ರಮೇಶ್ ಕುಡ್ಮೇರು,ಪ್ರಭಾಕರ ಪ್ರಭು, ಗೀತಾ ಚಂದ್ರಶೇಖರ ಪೂಜಾರಿ, ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ದಿವಾಕರ ಮುಗುಳ್ಯ, ನವೀನ್ ಬೆಂಜನಪದವು, ಗ್ರಾಮಕರಣೀಕರಾದ ಪ್ರದೀಪ್, ಯಶ್ವಿತ, ಕರಿಬಸಪ್ಪ, ಮಂಜುನಾಥ್, ನಿಶ್ಮಿತ, ಪ್ರಶಾಂತ್ ಕನ್ಯಾನ, […]

Read More

ಕರೋಪಾಡಿ ಗ್ರಾಮದ ಸಾರದಕೋಡಿಯಲ್ಲಿ ಪ್ರಾಕೃತಿಕ ವಿಕೋಪ ಪರಿಹಾರ ಚೆಕ್ ವಿತರಣೆ

ಕರೋಪಾಡಿ ಗ್ರಾಮದ ಸಾರದಕೋಡಿಯಲ್ಲಿ ಸಿಡಿಲಾಘಾತದಿಂದ ಮೃತಪಟ್ಟ ಚಂದಪ್ಪ ಮೂಲ್ಯ ಇವರ ಧರ್ಮಪತ್ನಿ ಸುಮಿತ್ರಾ ಮೂಲ್ಯ ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಪ್ರಾಕೃತಿಕ ವಿಕೋಪದಡಿ ಪರಿಹಾರವಾಗಿ ರೂ. 5 ಲಕ್ಷದ ಚೆಕ್‌ನ್ನು ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಜಿ.ಪಂ.ಸದಸ್ಯರಾದ ಕಮಲಾಕ್ಷಿ ಪೂಜಾರಿ, ತಾ.ಪಂ.ಸದಸ್ಯರಾದ ರಮೇಶ್ ಕುಡ್ಮೇರು,ಪ್ರಭಾಕರ ಪ್ರಭು, ಗೀತಾ ಚಂದ್ರಶೇಖರ ಪೂಜಾರಿ, ಕರೋಪಾಡಿ ಗ್ರಾ.ಪಂ.ಸದಸ್ಯರಾದ ಅಶ್ವತ್ ಮಂಟಮೆ, ಜಯರಾಮ ಶೆಟ್ಟಿ ಅನೆಯಾಲಗುತ್ತು ಉಪಸ್ಥಿತರಿದ್ದರು.

Read More

ಪಾಲ್ದಡ್ಕದಿಂದ ಹಿರ್ಣಿ- ರಾಯಿ ಹೋರಂಗಳಕ್ಕೆ ನೂತನ ರಸ್ತೆ ಕಾಮಗಾರಿಗೆ ಶಿಲಾನ್ಯಾಸ

ಬಂಟ್ವಾಳ ತಾಲೂಕಿನ ಅರಳ ಗ್ರಾಮದ ಪಾಲ್ದಡ್ಕದಿಂದ ಹಿರ್ಣಿ- ಸಿದ್ದಯ್ಯಕೋಡಿ ಮೂಲಕ ರಾಯಿ ಹೋರಂಗಳಕ್ಕೆ ಸಂಪರ್ಕ ಕಲ್ಪಿಸುವ ನೂತನ ರಸ್ತೆ ರಚನೆಗೆ ಬಂಟ್ವಾಳದ ಜನಪ್ರಿಯ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಶಿಲಾನ್ಯಾಸ ನೆರವೇರಿಸಿದರು. ಗಡಿನಾಡು ಅಭಿವೃದ್ಧಿ ಯೋಜನೆಯಲ್ಲಿ ರೂ. 50 ಲಕ್ಷ ಅನುದಾನವನ್ನು ಮಾನ್ಯ ಶಾಸಕರು ಈ ಕಾಮಗಾರಿಗೆ ಮಂಜೂರು ಮಾಡಿರುತ್ತಾರೆ. ಈ ಸಂಧರ್ಭದಲ್ಲಿ ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಕ್ಷೇತ್ರ ಪ್ರಧಾನಕಾರ್ಯದರ್ಶಿ ಡೊಂಬಯ ಅರಳ, ಪಂಚಾಯತ್ ಸದಸ್ಯರಾದ ಲಕ್ಷ್ಮೀಧರ ಶೆಟ್ಟಿ, ಪ್ರಸನ್ನ ಕುಮಾರ್ ಶೆಟ್ಟಿ, ಚಂದ್ರಹಾಸ […]

Read More

ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ

ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಇದರ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ 2019-20 ನೇ ಸಾಲಿನ ಫಲಾನುಭವಿಗಳಿಗೆ ಮಾನ್ಯ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮಂಜೂರಾತಿ ಪತ್ರ ಮತ್ತು ಆಟೋರಿಕ್ಷಾವನ್ನು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಫಲಾನುಭವಿಗಳಾದ ಸುಧಾಕರ, ವಾಮನ, ರಮೇಶ್, ಮೋಹನ, ಮಾಧವ, ವನಿತಾ, ಮಹಾಬಲೇಶ್ವರವರಿಗೆ ವಿತರಿಸಿದರು. ಈ ಸಂದರ್ಭದಲ್ಲಿ ನಿಗಮದ ಅಧಿಕಾರಿ ಶಿವರಾಮ್ ಉಪಸ್ಥಿತರಿದ್ದರು.

Read More

Back To Top
Highslide for Wordpress Plugin