Rajesh Naik

ಮುಖ್ಯಮಂತ್ರಿ ಪರಿಹಾರ ನಿಧಿಗೆ ಭಾರತೀಯ ಮಜ್ದೂರು ಸಂಘ, ರಿಕ್ಷಾ ಚಾಲಕರು ಮತ್ತು ಮಾಲಕರು ಬಂಟ್ವಾಳ ವತಿಯಿಂದ 25,000 ರೂ.ಗಳ ಚೆಕ್ ಹಸ್ತಾಂತರ

ಭಾರತೀಯ ಮಜ್ದೂರು ಸಂಘ, ರಿಕ್ಷಾ ಚಾಲಕರು ಮತ್ತು ಮಾಲಕರು ಬಂಟ್ವಾಳ ಇವರ ವತಿಯಿಂದ ನೆರೆಸಂತ್ರಸ್ತರ ನೆರವಿಗೆ 25,000 ರೂ. ಚೆಕ್ ನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಮೂಲಕ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಎ.ಗೋವಿಂದ ಪ್ರಭು, ಜಯರಾಮ ರೈ, ವಸಂತ ಕುಮಾರ್ ಮಣಿಹಳ್ಳ, ಸದಾನಂದ ನಾವೂರು, ನಾರಾಯಣ, ರಾಜೇಶ್ ನೆಕ್ಕರೆ, ಉಮಾಶಂಕರ್ ಚೆಂಡ್ತಿಮಾರ್, ರಮೇಶ್, ವಿಶ್ವನಾಥ, ಮೋಹನ್, ಜನಾರ್ದನ, ಗಣೇಶ್ ದಾಸ್, ರಂಜಿತ್ ಮೈರ, ಸುರೇಶ್ ಮೈರ, ಪ್ರವೀಣ್ ಗಟ್ಟಿ ಮತ್ತು […]

Read More

ಬಿಜೆಪಿ ರಾಜ್ಯಾಧ್ಯಕ್ಷರಾದ ಸಂಸದ ಶ್ರೀ ನಳಿನ್ ಕುಮಾರ್ ಕಟೀಲು ಇವರಿಗೆ ಆತ್ಮೀಯ ಸ್ವಾಗತ

ಬಿಜೆಪಿ ರಾಜ್ಯಾಧ್ಯಕ್ಷರಾದ ಸಂಸದ ಶ್ರೀ ನಳಿನ್ ಕುಮಾರ್ ಕಟೀಲು ಇವರಿಗೆ ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು, ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರಿಂದ ಆತ್ಮೀಯ ಸ್ವಾಗತ.

Read More

ಪಿಲಾತಬೆಟ್ಟು ಗ್ರಾ.ಪಂ. ಹಾಗೂ ಸ್ವಸ್ತಿಕ್ ಪ್ರೆಂಡ್ಸ್ ಕ್ಲಬ್ (ರಿ.) ಪುಂಜಾಲಕಟ್ಟೆ ಇವರ ಸಹಭಾಗಿತ್ವದಲ್ಲಿ ಡೆಸ್ಕ್ ವಿತರಣೆ

ಬಂಟ್ವಾಳ: ಪಿಲಾತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸ್ವಸ್ತಿಕ್ ಪ್ರೆಂಡ್ಸ್ ಕ್ಲಬ್ (ರಿ.) ಪುಂಜಾಲಕಟ್ಟೆ ಇವರ ಸಹಭಾಗಿತ್ವದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಪಿಲಾತಬೆಟ್ಟು ಗ್ರಾ.ಪಂ.ನ ಸಭಾಂಗಣದಲ್ಲಿ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ಹಾಗೂ ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಮೂರು ಶಾಲೆಗಳಿಗೆ ಮೂರ್ಜೆ ಸರಕಾರಿ ಹಿ.ಪ್ರಾಥಮಿಕ ಶಾಲೆ, ಅರಳ ಸರಕಾರಿ ಪ್ರಾಥಮಿಕ ಶಾಲೆ ಮತ್ತು ಚಾರ್ಮಾಡಿ ಸರಕಾರಿ ಪ್ರಾಥಮಿಕ ಶಾಲೆಗೆ ಸುಮಾರು ನಾಲ್ಕು ಲಕ್ಷ ವೆಚ್ಚದಲ್ಲಿ ಡೆಸ್ಕ್ ಗಳನ್ನು ವಿತರಿಸಿದರು. ಸವಲತ್ತುಗಳನ್ನು ವಿತರಿಸಿದ ಬಳಿಕ ಮಾತನಾಡಿದ ಶಾಸಕ ರಾಜೇಶ್ […]

Read More

ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕರ ಧಿಡೀರ್ ಭೇಟಿ

ಬಂಟ್ವಾಳ: ಪಿಲಾತಬೆಟ್ಟು ಗ್ರಾ.ಪಂ.ವ್ಯಾಪ್ತಿಯ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಧಿಡೀರ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅಲ್ಲಿನ ಸಮಸ್ಯೆಗಳ ಬಗ್ಗೆ ಸಾರ್ವಜನಿರು ಶಾಸಕರ ಗಮನಕ್ಕೆ ತಂದರು. ಈ ಆಸ್ಪತ್ರೆಯಲ್ಲಿ ಪೂರ್ಣಾವಧಿ ವೈದ್ಯಾಧಿಕಾರಿ ಇಲ್ಲದೆ ಸಾಕಷ್ಟು ತೊಂದರೆಯಾಗುತ್ತಿದೆ. ವಾರಕ್ಕೆ ಎರಡು ಬಾರಿ ವೈದ್ಯರು ಸೇವೆಕ್ಕೆ ಲಭ್ಯವಿರುವುದು ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಶಾಸಕರಲ್ಲಿ ಅಳಲು ತೋಡಿಕೊಂಡರು. ಹೆದ್ದಾರಿಯಲ್ಲಿ ಈ ಆಸ್ಪತ್ರೆ ಇದ್ದು ಅಪಘಾತ ಸಹಿತ ಅನೇಕ ಘಟನೆಗಳಿಗೆ ಈ ಆಸ್ಪತ್ರೆ ಬಹಳ ಅಗತ್ಯವಾಗಿರುವುದರಿಂದ ಪ್ರಾಥಮಿಕ […]

Read More

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಡಿಯೂರು ಸ್ವಾಮೀಜಿಯಿಂದ 10 ಲಕ್ಷ ರೂ.ಗಳ ಚೆಕ್ ಹಸ್ತಾಂತರ

ನೆರೆ ಸಂತ್ರಸ್ತರ ಪುನಶ್ಚೇತನಕ್ಕಾಗಿ ಪೂಜ್ಯ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮಿಜಿಗಳು ಸಂಸ್ಥಾನದ ವತಿಯಿಂದ 10 ಲಕ್ಷ ರೂ. ಚೆಕ್ ನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಮೂಲಕ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಲಾಯಿತು.

Read More

ವಿದ್ಯುತ್ ದುರಂತಕ್ಕೆ ಬಲಿಯಾದ ಕುಟುಂಬಸ್ಥರಿಗೆ ಪರಿಹಾರ ಧನದ ಚೆಕ್ ವಿತರಿಸಿದ ಶಾಸಕ ರಾಜೇಶ್ ನಾಯ್ಕ್

ಇತ್ತೀಚೆಗೆ ವಾಮದಪದವು ಬಾರೆಕ್ಕಿನಡೆಯಲ್ಲಿ ವಿದ್ಯುತ್ ದುರಂತಕ್ಕೆ ಬಲಿಯಾದ ದಿ.ಗೋಪಾಲ ಶೆಟ್ಟಿ ಮತ್ತು ದಿ.ದಿವ್ಯ ಶ್ರೀಯವರ ಕುಟುಂಬಸ್ಥರಿಗೆ 10 ಲಕ್ಷ ರೂ. ಪರಿಹಾರದ ಚೆಕ್‌ನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ MRPL ವತಿಯಿಂದ ಇಂದು 5 ಕೋಟಿ ರೂ.ಗಳ ಚೆಕ್ ಹಸ್ತಾಂತರ

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ವತಿಯಿಂದ ದಿನಾಂಕ 22-08-2019 ರಂದು 5 ಕೋಟಿ ರೂ.ಗಳ ಚೆಕ್ ನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್‌. ಯಡಿಯೂರಪ್ಪನವರಿಗೆ ಹಸ್ತಾಂತರಿಸಲಾಯಿತು. ಈ ವೇಳೆ ಸಚಿವ ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ ಪೂಜಾರಿ, ಬಂಟ್ವಾಳ ಶಾಸಕ‌ ರಾಜೇಶ್ ನಾಯ್ಕ್, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಶಾಸಕರುಗಳಾದ ಉಮಾನಾಥ್ ಕೋಟ್ಯಾನ್, ಸಂಜೀವ್ ಮಠಂದೂರು ಹಾಗೂ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಸಂಸ್ಥೆಯ ಅಧಿಕಾರಿಗಳು ಹಾಜರಿದ್ದರು.

Read More

ಬಂಟ್ವಾಳ : ನೂತನ ಸಚಿವ ಶ್ರೀ ಕೋಟ ಶ್ರೀನಿವಾಸ್ ಪೂಜಾರಿಯವರನ್ನು ಸ್ವಾಗತಿಸಿದ ಶಾಸಕರಾದ ರಾಜೇಶ್ ನಾಯ್ಕ್

ಬಂಟ್ವಾಳ: ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪನವರ ನೇತ್ರತ್ವದ ಬಿಜೆಪಿ ಸರಕಾರದಲ್ಲಿ ರಾಜ್ಯದ ನೂತನ ಸಂಪುಟದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಥಮವಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ ಕೋಟ ಶ್ರೀನಿವಾಸ್ ಪೂಜಾರಿಯವರನ್ನು ಬಂಟ್ವಾಳ ಬಿಜೆಪಿ ವತಿಯಿಂದ ಬಿ.ಸಿ ರೋಡ್ ನಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ನೇತೃತ್ವದಲ್ಲಿ ಸ್ವಾಗತಿಸಲಾಯಿತು. ಅದಕ್ಕೂ ಮೊದಲು ಮಾಣಿ ಜಂಕ್ಸನಲ್ಲಿ ಹಾಗೂ ಕಲ್ಲಡ್ಕ ಪೇಟೆಯಲ್ಲಿ ಕಾರ್ಯಕರ್ತರು ಶಾಲು ಹೊದಿಸಿ ಸ್ವಾಗತಿಸಿದರು, ಹಾಗೂ ಜೈಕಾರ ಕೂಗಿದರು. ಸಿಹಿ ತಿಂಡಿ ತಿನಿಸುವ ಮೂಲಕ ಹರ್ಷ ವ್ಯಕ್ತಪಡಿಸಿದರು. […]

Read More

ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಸಂಸದ ನಳಿನ್ ಕುಮಾರ್ ಕಟೀಲು ಅವರನ್ನು ಅಭಿನಂದಿಸಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಬಿಜೆಪಿಯ ರಾಜ್ಯದ ಚುಕ್ಕಾಣಿ ಹಿಡಿದ ದ.ಕ.ಸಂಸದ ನಳಿನ್ ಕುಮಾರ್ ಕಟೀಲು. ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಅವರು ಆಯ್ಕೆಯಾಗಿದ್ದಾರೆ ಎಂದು ಪಕ್ಷ ಘೋಷಣೆ ಮಾಡಿದೆ. ಮುಂದಿನ ಮೂರು ವರ್ಷಗಳ ಅವಧಿಗೆ ರಾಜ್ಯಾಧ್ಯಕ್ಷರಾಗಿ ನಳಿನ್ ಅವರ ನೇಮಕವಾಗಿದ್ದು ಜಿಲ್ಲೆಯ ಜನತೆಗೆ ಖುಷಿಯ ವಿಚಾರ. ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ಉಡುಪಿ ಮೂಲದ ಸಂತೋಷ್ ಜಿ ಯವರು ನೇಮಕವಾದ ಬೆನ್ನಲ್ಲೇ ರಾಜ್ಯದ ಪ್ರಮುಖ ಹುದ್ದೆಯಾದ ರಾಜ್ಯಾಧ್ಯಕ್ಷ ಹುದ್ದೆ ಜಿಲ್ಲೆಗೆ ದೊರಕಿರುವುದು ಜಿಲ್ಲೆಯ ಜನತೆಗೆ ಸಂತೋಷದಾಯಕವಾದ ವಿಚಾರ. ಸತತವಾಗಿ ಮೂರು […]

Read More

ಅಮ್ಟಾಡಿ ಗ್ರಾ.ಪಂ. : ಸಂತ್ರಸ್ತರಿಗೆ ಪರಿಹಾರ ಧನದ ಚೆಕ್ ವಿತರಿಸಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಅಮ್ಟಾಡಿ ಗ್ರಾಮ ಪಂಚಾಯತ್‌ನ ಅಮ್ಟಾಡಿ ಗ್ರಾಮದಲ್ಲಿ ಮಳೆ ಪ್ರವಾಹದಿಂದಾಗಿ ಸಂಕಷ್ಟಕ್ಕೊಳಗಾದ ಫಲಾನುಭವಿಗಳಿಗೆ ತಲಾ ರೂ.10,000/-ದಂತೆ ಪರಿಹಾರ ಧನದ ಚೆಕ್ಕನ್ನು ಶಾಸಕರಾದ ಶ್ರೀ ರಾಜೇಶ್ ನಾಯ್ಕ್‌ರವರು ವಿತರಿಸಿದರು. ಈ ಸಂಧರ್ಭದಲ್ಲಿ ಬಂಟ್ವಾಳ ತಹಶೀಲ್ದಾರ್ ರಶ್ಮಿ,ಕಂದಾಯ ನಿರೀಕ್ಷಕರು , ಪಂಚಾಯತ್ ಅದ್ಯಕ್ಷ ಹರೀಶ್ ಶೆಟ್ಟಿ ಪಡು, ಪಂಚಾಯತ್ ಉಪಾಧ್ಯಕ್ಷೆ ಯಶೋಧಾ, ಸದಸ್ಯರಾದ ಸುನೀಲ್, ಸುರೇಂದ್ರ, ದೇವದಾಸ, ಶ್ರೀಮತಿ ಶೆಟ್ಟಿ, ಪೂರ್ಣಿಮ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಹಾಗೂ ಗ್ರಾಮಕರಣಿಕರು ಹಾಗೂ ಗ್ರಾಮ ಜನರು ಉಪಸ್ಥಿತರಿದ್ದರು.

Read More

Back To Top
Highslide for Wordpress Plugin