Rajesh Naik

ನಾವೂರು ಗ್ರಾ.ಪಂ: ಉಜ್ವಲ ಯೋಜನೆಯಡಿ ಫಲಾನುಭವಿಗಳ ವಿತರಣಾ ಕಾರ್ಯಕ್ರಮ

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಉಜ್ವಲ ಯೋಜನೆಯಡಿ ನಾವೂರು ಗ್ರಾಮಪಂಚಾಯತ್ ವ್ಯಾಪ್ತಿಯ ಅರ್ಹ ಫಲಾನುಭಾವಿಗಳಿಗೆ ನಾವೂರ ಕನಪಾದೆಯ ಶ್ರೀ ಸತ್ಯದೇವತಾ ಗೆಳೆಯರ ಬಳಗ ಸಭಾಭವನದಲ್ಲಿ ಉಚಿತ ಗ್ಯಾಸ್ ಮತು ಸ್ಟೌವ್‌ವನ್ನು ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತುರವರು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ದೇಶದ ಪ್ರಧಾನಿ ನರೇಂದ್ರ ಮೋದಿಯವರು 125 ಕೋಟಿ ಜನರ ಪ್ರಧಾನ ಸೇವಕರಾಗಿ ಕಾರ್ಯ ಮಾಡುತ್ತಿದ್ದು ಈವರೆಗೆ ರಜೆ ತೆಗೆದುಕೊಳ್ಳದೆ ದಿನದ 18 ಗಂಟೆ ಕೆಲಸ ಮಾಡುತ್ತಿದ್ದು […]

Read More

ಸಂಸದೆ ಶೋಭಾ ಕರಂದ್ಲಾಜೆಯವರಿಂದ ಪತ್ರಿಕಾಗೋಷ್ಟಿ

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ಬಿಸಿಯೂಟದ ಅನುದಾನ ರದ್ದುಗೊಳಿಸಿರುವ ರಾಜ್ಯ ಸರಕಾರದ ಧೋರಣೆ ಖಂಡಿಸಿ ಸಂಸದೆ ಶೋಭಾ ಕರಂದ್ಲಾಜೆಯವರಿಂದ ದಿನಾಂಕ 17-8-2017ರಂದು ಮಂಗಳೂರಿನಲ್ಲಿ ಪತ್ರಿಕಾಗೋಷ್ಟಿ ನಡೆಯಿತು. ಈ ಸಂದರ್ಭದಲ್ಲಿ ದ.ಕ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜೇಶ್ ನಾಯ್ಕ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Read More

ಕಲ್ಲಡ್ಕದಲ್ಲಿ “ಮುಷ್ಟಿ ಅಕ್ಕಿ” ಅಭಿಯಾನಕ್ಕೆ ಚಾಲನೆ

ಶ್ರೀ ರಾಮ ಶಾಲೆ ಕಲ್ಲಡ್ಕದ ಬಿಸಿಯೂಟದ ಅನುದಾನವನ್ನು ಸರ್ಕಾರ ರದ್ದುಗೊಳಿಸಿರುವ ಕಾರಣ ಶಾಲಾ ಮಕ್ಕಳು ಕಷ್ಟ ಅನುಭವಿಸುವ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮನೆ ಮನೆಯಿಂದ ಭಿಕ್ಷೆ ಎತ್ತಿ ಅಕ್ಕಿ ಸಂಗ್ರಹ ಮಾಡಿ ಕೊಡಲು ನಿರ್ಧರಿಸಿ “ಮುಷ್ಟಿ ಅಕ್ಕಿ” ಅಭಿಯಾನವನ್ನು ಆರಂಭ ಮಾಡಲಾಯಿತು. ದ.ಕ ಜಿಲ್ಲಾ ಮತ್ತು ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಮುಷ್ಟಿ ಅಕ್ಕಿ ಅಭಿಯಾನ ಜಿಲ್ಲಾದ್ಯಂತ ನಡೆಯಲಿದೆ. ಸಂಸದೆ ಕು. ಶೋಭಾ ಕರಂದ್ಲಾಜೆ ಈ ಅಭಿಯಾನಕ್ಕೆ ಕಲ್ಲಡ್ಕದಲ್ಲಿ ಚಾಲನೆ ನೀಡಿದರು. ಡಾ. ಪ್ರಭಾಕರ […]

Read More

ಸಾಲೆತ್ತೂರು ಗ್ರಾಮದ ಬೂತ್ ಸಂಖ್ಯೆ 225ರಲ್ಲಿ ಸಂಘಟನಾತ್ಮಕ ಸಭೆ

ಸಾಲೆತ್ತೂರು ಗ್ರಾಮದ ಬೂತ್ ಸಂಖ್ಯೆ 225ರಲ್ಲಿ ದಿನಾಂಕ 16-8-2017ರಂದು ಪಕ್ಷದ ಕಾರ್ಯಕರ್ತರೊಂದಿಗೆ ಸಂಘಟನಾತ್ಮಕವಾದ ಸಭೆ ನಡೆಸಲಾಯಿತು. ಬಿಜೆಪಿ ಪ್ರಮುಖ ರಾಜೇಶ್ ನಾಯ್ಕ್ ಸಭಿಕರನ್ನುದ್ದೇಶಿಸಿ ಮಾತನಾಡಿದರು.

Read More

ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಪ್ರತಿಕಾಗೋಷ್ಟಿ

ಸ್ವಯಂಸೇವಕ ಶರತ್ ಹತ್ಯೆಯ ಎಲ್ಲಾ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಮತ್ತು ಕಲ್ಲಡ್ಕ ಶ್ರೀರಾಮ ವಿಧ್ಯಾಕೇಂದ್ರ, ಪುಣಚ ಶ್ರೀದೇವಿ ವಿದ್ಯಾಲಯ ಬಿಸಿಯೂಟದ ಅನುದಾನ ಕಡಿತಗೊಳಿಸಿದ ಸರಕಾರದ ಧೋರಣೆಯನ್ನು ಖಂಡಿಸಿ ಸಂಸದ ನಳಿನ್ ಕುಮಾರ್ ಕಟೀಲುರವರಿಂದ ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ದಿನಾಂಕ 16-8-2017ರಂದು ಪ್ರತಿಕಾಗೋಷ್ಟಿ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Read More

ಅರಳ ಗ್ರಾ.ಪಂ: ಉಜ್ವಲ ಯೋಜನೆಯಡಿ ಫಲಾನುಭವಿಗಳ ವಿತರಣಾ ಕಾರ್ಯಕ್ರಮ

ನರೇಂದ್ರ ಮೋದಿಯ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಡಿಯಲ್ಲಿ ಅರಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಮತ್ತು ಸ್ಟವ್ ವಿತರಣಾ ಕಾರ್ಯಕ್ರಮವು ಅರಳ ನವಶಕ್ತಿ ಯುವಕ ಮಂಡಲದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದ ಶ್ರೀ ರಾಜೇಶ್ ನಾಯ್ಕ್ ಅವರು ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ತಲುಪಿಸುವ ಜವಾಬ್ದಾರಿ ಪಂಚಾಯತ್ ಸದಸ್ಯರು ಮತ್ತು ಕಾರ್ಯಕರ್ತರ ಜವಾಬ್ದಾರಿ. ಸಂಸದ ನಳಿನ್ ಕುಮಾರ್ ಕಟೀಲ್‌ರವರು ಕೇಂದ್ರ ಸರಕಾರದ ಬಹಳಷ್ಟು ಯೋಜನೆಗಳನ್ನು ನಮ್ಮ ಜಿಲ್ಲೆಗೆ ತಂದಿದ್ದಾರೆ. […]

Read More

ಬಂಟ್ವಾಳದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಭಾತ್ ಪೇರಿ

71ನೇ ಸ್ವಾತಂತ್ರ್ಯೋತ್ಸವದ ಆಚರಣೆ ಅಂಗವಾಗಿ ದಿನಾಂಕ 15-8-2017ರಂದು ಪ್ರಭಾತ್ ಪೇರಿ ಕಾರ್ಯಕ್ರಮವು ಬಂಟ್ವಾಳ ಕ್ಷೇತ್ರ ಬಿಜೆಪಿ ನೇತೃತ್ವದಲ್ಲಿ ಬಂಟ್ವಾಳದಲ್ಲಿ ಜರಗಿತು. ಬಂಟ್ವಾಳ ಪೇಟೆಯ ರಾಮನಗರದಿಂದ ಶ್ರೀಮಹಾಲಿಂಗೇಶ್ವರ ದೇವಸ್ಥಾನದವರೆಗೆ ರಾಷ್ಟ್ರಧ್ವಜ ಹಿಡಿದು ಮೆರವಣಿಗೆಯಲ್ಲಿ ಬಂದು ಜನಗಣಮನದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಮುಖರಾದ ಯು.ರಾಜೇಶ್ ನಾಯ್ಕ್, ಕ್ಷೇತ್ರ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಜಿ.ಆನಂದ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

Read More

ಶ್ರೀರಾಮ ಮಂದಿರ ಕಲ್ಲಡ್ಕದ ಮೊಸರು ಕುಡಿಕೆ ಉತ್ಸವದಲ್ಲಿ

ಶ್ರೀರಾಮ ಮಂದಿರ ಕಲ್ಲಡ್ಕ ಇದರ 85ನೇ ವರ್ಷದ ಮೊಸರು ಕುಡಿಕೆ ಉತ್ಸವದಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್, ಡಾ| ಪ್ರಭಾಕರ ಭಟ್ ಕಲ್ಲಡ್ಕ ಹಾಗೂ ಇನ್ನೂ ಅನೇಕ ಗಣ್ಯರು ಉತ್ಸವದಲ್ಲಿ ಪಾಲ್ಗೊಂಡಿದ್ದರು.  

Read More

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವೀರ ಯೋಧರಿಗೆ ಸನ್ಮಾನ ಮತ್ತು ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

ನೆಟ್ಲ ಸರಕಾರಿ ಹಿ.ಪ್ರಾ ಶಾಲೆಯಲ್ಲಿ ದಿನಾಂಕ 15-8-2017ರಂದು ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವೀರ ಯೋಧರಿಗೆ ಸನ್ಮಾನ ಮತ್ತು ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Read More

ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಾಣಿಯಲ್ಲಿ ಸ್ವಚ್ಛ ಭಾರತ ಕಾರ್ಯಕ್ರಮ

71ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಿಜೆಪಿ ಯುವಮೋರ್ಚಾ ಬಂಟ್ವಾಳದ ವತಿಯಿಂದ ಮಾಣಿಯಲ್ಲಿ ಸ್ವಚ್ಛ ಭಾರತ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಹಾಗೂ ಮೊದಲಾದವರು ಪಾಲ್ಗೊಂಡಿದ್ದರು.

Read More

Back To Top
Highslide for Wordpress Plugin